ಹಾಸನ, 01 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲಾಡಳಿತದ ವತಿಯಿಂದ ಅ.02 ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಬೆಳಗ್ಗೆ 9 ಗಂಟೆಗೆ ಮಹಾತ್ಮ ಗಾಂಧೀಜಿ ಅವರ ಜಯಂತಿ ಹಾಗೂ ಭಾರತದ ಮಾಜಿ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಜಿಲ್ಲಾಡಳಿತ ಕೋರಿದೆ.
ಬೆಳಗ್ಗೆ 06 ಗಂಟೆಯಿಂದ 08 ಗಂಟೆಯವರೆಗೆ ಗಾಂಧಿ ಭವನದಿಂದ ಶಂಕರ ಮಠದ ರಸ್ತೆಯ ವರೆಗೆ ಮತ್ತು ಡೈರಿ ವೃತ್ತದಿಂದ ಎನ್.ಆರ್ ವೃತ್ತದ ವರೆಗೆ ಶ್ರಮದಾನ ಕಾರ್ಯಕ್ರಮ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa