ಬಳ್ಳಾರಿ, 12 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಂಸದ ಈ. ತುಕಾರಾಂ ಅವರು ನಾಳೆ ಬೆಳಗ್ಗೆ 9.30 ರಿಂದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಕೇಂದ್ರ ಮತ್ತು ಕೇಂದ್ರ ಸರ್ಕಾರ ಜಾರಿ ಮಾಡಿರುವ ಯೋಜನೆಗಳ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ, ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತಿಯ `ಅಬ್ದುಲ್ ನಜೀರ್ ಸಾಬ್' ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿಯ `ದಿಶಾ'ದ ಎರಡನೆಯ
ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್