ವಿಜಯಪುರ ಜಿಲ್ಲೆಯಲ್ಲಿ ಇಬ್ಬರ ಬರ್ಬರ ಹತ್ಯೆ
ವಿಜಯಪುರ, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಲ್ಲಿನಿಂದ ಜಜ್ಜಿ ಇಬ್ಬರ ಬರ್ಬರ ಹತ್ಯೆಗೈದಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಎಂಬುವವರ ಕೊಲೆ ಆಗಿದೆ. ಹಳೆಯ ವೈಷಮ್ಯದಿಂದ ಸಾಗರ್ ಹಾಗೂ ಇಸಾಕ್ ಮೇಲೆ ಹಲ್ಲೆ ಮಾಡಿ ಕೊಲ
ಮರ್ಡರ್


ವಿಜಯಪುರ, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಲ್ಲಿನಿಂದ ಜಜ್ಜಿ ಇಬ್ಬರ ಬರ್ಬರ ಹತ್ಯೆಗೈದಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಡೆದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖರೇಷಿ (24) ಎಂಬುವವರ ಕೊಲೆ ಆಗಿದೆ.

ಹಳೆಯ ವೈಷಮ್ಯದಿಂದ ಸಾಗರ್ ಹಾಗೂ ಇಸಾಕ್ ಮೇಲೆ ಹಲ್ಲೆ ಮಾಡಿ ಕೊಲೆಗೈದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಎರಡು ವರ್ಷಗಳ ಹಿಂದೆ ತಮ್ಮೂರಿನ ಈರನಗೌಡ ಮೇಲೆ ಇಸಾಕ್ ಖರೇಷಿ ಹಾಗೂ ಸಾಗರ ಹಲ್ಲೆ ಮಾಡಿದ್ದರು. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದು ಈರನಗೌಡ ಮೃತಪಟ್ಟಿದ್ದ‌‌ರು.

ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರುವ ಬಗ್ಗೆ ಸಂಶಯ ಮೂಡಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೋಲೀಸರ ಭೇಟಿ ಹಾಗೂ ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande