ರಾಯಚೂರು : ಟಿ.ಎಸ್.ಪಿ ಕಲ್ಯಾಣ ಕಾರ್ಯಕ್ರಮದಡಿ ಅರ್ಜಿ ಆಹ್ವಾನ
ರಾಯಚೂರು, 13 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯಿಂದ 2019-20, 2022-23 ಹಾಗೂ 2023-24, 2024-25ನೇ ಸಾಲಿನ ಎಸ್.ಎಫ್.ಸಿ ನಿಧಿ & ನಗರಸಭೆ ನಿಧಿಯ ಶೇ.29ರ ಪರಿಷ್ಕøತ ಕ್ರಿಯಾ ಯೋಜನೆಯಡಿ ಟಿ.ಎಸ್.ಪಿ ಕಲ್ಯಾಣ ಕಾರ್ಯಕ್ರಮಗಳಲ್ಲಿ ಪಾಲಿಕೆ ವ್ಯಾಪ್ತಿಯ ಅರ್ಹ ಫಲಾನುಭವಿ
ರಾಯಚೂರು : ಟಿ.ಎಸ್.ಪಿ ಕಲ್ಯಾಣ ಕಾರ್ಯಕ್ರಮದಡಿ ಅರ್ಜಿ ಆಹ್ವಾನ


ರಾಯಚೂರು, 13 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ಮಹಾನಗರ ಪಾಲಿಕೆಯಿಂದ 2019-20, 2022-23 ಹಾಗೂ 2023-24, 2024-25ನೇ ಸಾಲಿನ ಎಸ್.ಎಫ್.ಸಿ ನಿಧಿ & ನಗರಸಭೆ ನಿಧಿಯ ಶೇ.29ರ ಪರಿಷ್ಕøತ ಕ್ರಿಯಾ ಯೋಜನೆಯಡಿ ಟಿ.ಎಸ್.ಪಿ ಕಲ್ಯಾಣ ಕಾರ್ಯಕ್ರಮಗಳಲ್ಲಿ ಪಾಲಿಕೆ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವೈಯಕ್ತಿಕ ಹರಿಯುವ ನೀರು ಶೌಚಾಲಯ ಹೊಂದಿರದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಸ್ವಂತ ಸೆಪ್ಟಿಕ್ ಟ್ಯಾಂಕ್ ಶೌಚಾಲಯ ನಿರ್ಮಾಣಕ್ಕೆ ಗರಿಷ್ಟ 15,000ರೂ.ಗಳಿಗೆ ಮಿತಿಗೊಳಿಸಿ ಮತ್ತು ಯುಜಿಡಿ ಸಂಪರ್ಕ ಹೊಂದುವ ಶೌಚಾಲಯ ನಿರ್ಮಾಣಕ್ಕೆ ಗರಿಷ್ಟ 10,000ರೂ.ಗಳಿಗೆ ನಿಗದಿಪಡಿಸಲಾಗಿದೆ.

ದಾಖಲಾತಿಗಳು: ನಿಗದಿತ ನಮೂನೆಯಲ್ಲಿ ಅರ್ಜಿ, ದೃಢೀಕೃತ ಜಾತಿ ಮತ್ತು ಅದಾಯ ಪ್ರಮಾಣ ಪತ್ರ (ಪ್ರಸಕ್ತ ಚಾಲ್ತಿ ಸಾಲು), ದೃಢೀಕೃತ ವಾಸಸ್ಥಳಕ್ಕೆ ಗುರುತಿನ ಚೀಟಿ/ರೇಷನ್ ಕಾರ್ಡ್, ಪಾಸ್ ಫೋಟೋ ಅಳತೆಯ ಭಾವ ಚಿತ್ರ-2, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಐ.ಎಫ್.ಎಸ್.ಸಿ ಕೋಡ್‍ನೊಂದಿಗೆ ಬ್ಯಾಂಕ್ ವಿವರ, ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಜಾಗದ ಛಾಯಾಚಿತ್ರ ಹಾಗೂ ಮೋಬೈಲ್ ನಂಬರ್‍ನೊಂದಿಗೆ ಅಕ್ಟೋಬರ್ 29ರ ಸಂಜೆ 5ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅವದಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರಿಯಾದ ದಾಖಲಾತಿಗಳು ಸಲ್ಲಿಸದೇ ಇದ್ದ ಪಕ್ಷದಲ್ಲಿ ತಮಗೆ ಯಾವುದೇ ಹಿಂಬರಹ ಕಳುಹಿಸದೇ ನೇರವಾಗಿ ವಿಭಾಗದ ಸಿಬ್ಬಂದಿಯವರು ತಿರಸ್ಕೃತ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ನೋಟಿಸ್ ಬೋರ್ಡ ನೋಡಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande