ಕೊಪ್ಪಳ, 13 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಗಂಗಾವತಿಯ ಎಲ್ಜಿ ರಸ್ತೆಯ ಭಾರತಿ ಆರ್ಕೇಡ್ನಲ್ಲಿರುವ ಎಯು ಸ್ಮಾಲ್ ಫಿನಾನ್ಸ್ ಬ್ಯಾಂಕ್ ಲಿ. ನಲ್ಲಿ ಅಕ್ಟೋಬರ್ 1 6 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ನೇರ ಸಂದರ್ಶನ ನಡೆಯಲಿದೆ.
ನೇರ ಸಂದರ್ಶನದಲ್ಲಿ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಎಸ್ಎಸ್ಎಲ್ಸಿ, ಪಿಯುಸಿ ಹಾಗೂ ಇತರೆ ಪದವಿ ಪಡೆದ 18 ರಿಂದ 30 ವರ್ಷದೊಳಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವ್ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್