ಹಂಪೆ, 15 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಶ್ರೀ ವಿರೂಪಾಕ್ಷೇಶ್ವರ ಮತ್ತು ಶ್ರೀಮತಿ ಪಂಪಾಂಬಿಕೆಯ ದರ್ಶನ ಪಡೆದು ಪ್ರಾರ್ಥಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹಂಪೆಯ ಜಂಗಲ್ ರೆಸಾರ್ಟ್ನಲ್ಲಿ ಮಂಗಳವಾರ ರಾತ್ರಿ ತಂಗಿದ್ದ ಸಚಿವರು ಬುಧವಾರ ಬೆಳಗ್ಗೆ ಐತಿಹಾಸಿಕ ಮತ್ತು ಧಾರ್ಮಿಕ ಪ್ರಸಿದ್ಧ ಹಂಪೆಯ ಶ್ರೀ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡಿ,
ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ವಿದ್ಯಾರಣ್ಯ ಶ್ರೀಗಳು ಹಂಪೆ ಮತ್ತು ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಮಹತ್ವ, ಪಾವಿತ್ರ್ಯತೆ ಹಾಗೂ ಧಾರ್ಮಿಕ ಹಿನ್ನಲೆಗಳನ್ನು ಸಚಿವರಿಗೆ ವಿವರಿಸಿದರು.
ಹಂಪೆಯಿಂದ ಅವರು ಕೊಪ್ಪಳ ಜಿಲ್ಲೆಯ ಮೆತಗಲ್ ಗ್ರಾಮಕ್ಕೆ ಭೇಟಿ ನೀಡಿದ ನಂತರ, ಹೊಸಪೇಟೆಯ ಹೊಟೇಲ್ ಮಲ್ಲಿಗೆಯಲ್ಲಿ ಏರ್ಪಡಿಸಿದ್ದ ಪಿಎಂಐಎಸ್ ಇಂಟರ್ನಿಗಳ ಜೊತೆಯಲ್ಲಿ ಸಂವಹನ ನಡೆಸಿ, ಜಂಗಲ್ ರೆಸಾರ್ಟ್ನಲ್ಲಿ ತಂಗಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್