ಆರ್‌ಎಸ್‌ಎಸ್ ಕಾರ್ಯಕ್ರಮಗಳಿಗೆ ನಿಯಮ ರೂಪಿಸಲು ಸಚಿವ ಸಂಪುಟ ನಿರ್ಣಯ
ಬೆಂಗಳೂರು, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಆರ್‌ಎಸ್‌ಎಸ್ ಸಂಘಟನೆ ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುವುದನ್ನು ತಡೆಯಲು ನಿಯಮಗಳನ್ನು ರೂಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಚಟುವಟಿಕೆಗಳು ಮತ್ತು ಅ
Cabinet


ಬೆಂಗಳೂರು, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಆರ್‌ಎಸ್‌ಎಸ್ ಸಂಘಟನೆ ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುವುದನ್ನು ತಡೆಯಲು ನಿಯಮಗಳನ್ನು ರೂಪಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಚಟುವಟಿಕೆಗಳು ಮತ್ತು ಅದರ ಅಂಗಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್​. ಕೆ ಪಾಟೀಲ್, 'ನಾವು ತರಲು ಬಯಸುವ ನಿಯಮಗಳು ಸಾರ್ವಜನಿಕ ಸ್ಥಳಗಳು, ಸರ್ಕಾರಿ ಶಾಲೆಗಳು, ಕಾಲೇಜುಗಳು, ಸರ್ಕಾರಿ ಆವರಣಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಮತ್ತು ಅನುದಾನಿತ ಸಂಸ್ಥೆಗಳಿಗೆ ಸಂಬಂಧಿಸಿವೆ. ಗೃಹ ಇಲಾಖೆ, ಕಾನೂನು ಇಲಾಖೆ ಮತ್ತು ಶಿಕ್ಷಣ ಇಲಾಖೆ ಹೊರಡಿಸಿದ ಹಿಂದಿನ ಆದೇಶಗಳನ್ನು ಒಟ್ಟುಗೂಡಿಸಿ ಹೊಸ ನಿಯಮವನ್ನು ರೂಪಿಸುತ್ತೇವೆ. ಮುಂದಿನ ಎರಡು ಮೂರು ದಿನಗಳಲ್ಲಿ, ಹೊಸ ನಿಯಮವು ಕಾನೂನು ಮತ್ತು ಸಂವಿಧಾನದ ಚೌಕಟ್ಟಿನೊಳಗೆ ಜಾರಿಗೆ ಬರಲಿದೆ' ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande