ಜಾಬ್‌ಕಾರ್ಡ್ ಇ-ಕೆವೈಸಿ ಕಾರ್ಯಕ್ಕೆ ಸಹಕರಿಸಿ : ಮಲ್ಲಯ್ಯ ಕೊರವನವರ
ಗದಗ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾತ್ಮಾ ಗಾಂಧಿ ನರೇಗಾ ಯೋಜನೆ ಅಡಿ ನೋಂದಾಯಿತ, ಜಾಬ್ ಕಾರ್ಡ್ ಪಡೆದ ಕುಟುಂಬಸ್ಥರು ಇದೇ ಅಕ್ಟೋಬರ್-30ರ ಒಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮಾಡಲು ತಮ್ಮ ಮನೆಗಳಿಗೆ ಬಂದಾಗ ಸಹಕಾರ ನೀಡುವಂತೆ ತಾಲೂಕು ಪಂಚಾಯತ್
ಪೋಟೋ


ಗದಗ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮಾ ಗಾಂಧಿ ನರೇಗಾ ಯೋಜನೆ ಅಡಿ ನೋಂದಾಯಿತ, ಜಾಬ್ ಕಾರ್ಡ್ ಪಡೆದ ಕುಟುಂಬಸ್ಥರು ಇದೇ ಅಕ್ಟೋಬರ್-30ರ ಒಳಗಾಗಿ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಮಾಡಲು ತಮ್ಮ ಮನೆಗಳಿಗೆ ಬಂದಾಗ ಸಹಕಾರ ನೀಡುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ತಿಳಿಸಿದರು.

ಗದಗ ತಾಲೂಕು ಪಂಚಾಯತಿಯಿಂದ ಗೂಗಲ್ ಮೀಟ್ ಮೂಲಕ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.

ಸಕ್ರಿಯ ಉದ್ಯೋಗ ಚೀಟಿಗಳಿಗೆ ಇ- ಕೆವೈಸಿ ಮಾಡುವಂತೆ ಆಯುಕ್ತಾಲಯದಿಂದ ಆದೇಶ ಬಂದಿದೆ. ಅದರಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ, ಇ- ಕೆವೈಸಿ ಕಾರ್ಯಕ್ಕೆ ಅಗತ್ಯ ಸಿಬ್ಬಂದಿ ನಿಯೋಜಿಸಿ ಸಕ್ರಿಯವಾಗಿರುವ ಜಾಬ್‌ಕಾರ್ಡ್‌ಗಳಿಗೆ ಇ-ಕೆವೈಸಿ ಕಾರ್ಯ ಮಾಡುತ್ತಿದ್ದಾರೆ. ಈಗಾಗಲೇ ನಮ್ಮ ಸಿಬ್ಬಂದಿಗಳು ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಇ-ಕೆವೈಸಿ ಪ್ರಕಿಯೆಯಲ್ಲಿ ತೊಡಗಿಕೊಂಡಿದ್ದಾರೆ. ಈ ಪ್ರಕ್ರಿಯೆಯಲ್ಲಿ ಜಾಬ್‌ ಕಾರ್ಡ್ ಹೊಂದಿರುವ ಕೂಲಿಕಾರರೂ ತಮ್ಮ ತಮ್ಮ ಜಾಬ್‌ ಕಾರ್ಡ್ ಗಳಿಗೆ ಇ-ಕೆವೈಸಿ ಮಾಡಿಸಿಕೊಳ್ಳುವುದು. ಇ-ಕೆವೈಸಿ ಮಾಡಿಸಿಕೊಳ್ಳದ ಜಾಬ್‌ ಕಾರ್ಡ್‌ಗಳು ಮುಂದಿನ ದಿನಗಳಲ್ಲಿ ನಿಷ್ಕ್ರೀಯವಾಗುವ ಸಾಧ್ಯತೆಯಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರು ಸಾಧ್ಯವಾದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ತಿಳಿಸಿದರು.

ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ (ಉಖಾ) ಕುಮಾರ ಪೂಜಾರ ಅವರು ಮಾತನಾಡಿ, ಮಹಾತ್ಮ ಗಾಂಧಿ ಉದ್ಯೋಗ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಉದ್ಯೋಗ ಚೀಟಿ ಗಳಿಗೆ ಎನ್‌ಎಂಎಂಎಸ್‌ ಆ್ಯಪ್‌ ಮೂಲಕ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿದ್ದು, ಗ್ರಾಮ ಪಂಚಾಯತಿಯ ಗ್ರಾಮ ಕಾಯಕ ಮಿತ್ರರು, ಬಿಎಫ್‌ಟಿ, ಡಿಇಒ ಮತ್ತು ಕಾಯಕ ಬಂಧುಗಳನ್ನು ಸಕ್ರಿಯವಾಗಿ ಇ-ಕೆವೈಸಿ ಕಾರ್ಯದಲ್ಲಿ ತೊಡಗಿಸಿಕೊಂಡು ಪೂರ್ಣಗೊಳಿಸುವಂತೆ ತಿಳಿಸಿದರು. ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 27 ಗ್ರಾಮ ಪಂಚಾಯತಿಗಳಿದ್ದು, ಒಟ್ಟು 52,022 ಸಕ್ರಿಯ ಉದ್ಯೋಗ ಚೀಟಿಗಳಿವೆ. ಸದ್ಯ 11 ಸಾವಿರಕ್ಕೂ ಹೆಚ್ಚು ಜಾಬ್‌ಕಾರ್ಡ್‌ಗಳ ಇ- ಕೆವೈಸಿ ಮಾಡಲಾಗಿದೆ. ಸಾರ್ವಜನಿಕರು ಸಹಕಾರ ಈ ಕಾರ್ಯಕ್ಕೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಉದ್ಯೋಗ ಖಾತ್ರಿ ಯೋಜನೆಯ ನೋಂದಾಯಿತ ಸಕ್ರಿಯ ಕೂಲಿಕಾರರು ಇ-ಕೆವೈಸಿ ಮಾಡಿಕೊಳ್ಳಲು ಅ. 31ರ ಒಳಗಾಗಿ ಮಾಡಿಸುವುದು ಕಡ್ಡಾಯವಾಗಿದೆ. ಈಗಾಗಲೇ ಗ್ರಾಪಂ ಹಂತದ ಸಿಬ್ಬಂದಿ ಮನೆ- ಮನೆಗೆ ಭೇಟಿ ನೀಡಿ ಇ- ಕೆವೈಸಿ ಮಾಡಬೇಕು ಎಂದು ಗದಗ ತಾಲೂಕು ಕಾರ್ಯನಿರ್ವಾಹಕ ಅಧಿಕಾದಿ ಮಲ್ಲಯ್ಯ ಕೊರಕನವರ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande