ಇ-ಕೆವೈಸಿ, ನರೇಗಾ ಮಾನವ ದಿನಗಳ ಸೃಜನೆಯತ್ತ ಗಮನ ನೀಡಿ : ಇಓ ವಿಶ್ವನಾಥ ಹೊಸಮನಿ
ಗದಗ, 16 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನೋಂದಾಯಿತವಾಗಿರುವ ತಾಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರಗತಿ ಪೂರ್ಣಗೊಳಿಸಲು ತಾಲೂಕು ಪಂಚಾಯತ ನರೇಗಾ ಸಿಬ್ಬಂದಿಗೆ ತಾಪಂ ಇಓ ವಿಶ್ವನಾಥ
ಪೋಟೋ


ಗದಗ, 16 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನೋಂದಾಯಿತವಾಗಿರುವ ತಾಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರಗತಿ ಪೂರ್ಣಗೊಳಿಸಲು ತಾಲೂಕು ಪಂಚಾಯತ ನರೇಗಾ ಸಿಬ್ಬಂದಿಗೆ ತಾಪಂ ಇಓ ವಿಶ್ವನಾಥ ಹೊಸಮನಿ ತಿಳಿಸಿದರು.

ತಾಲೂಕು ಪಂಚಾಯತಿಯ ತಮ್ಮ ಕಚೇರಿಯಲ್ಲಿ ನರೇಗಾ ಸಿಬ್ಬಂದಿಗಳ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯವಾಗಿ ಮಾಡಬೇಕಿರುವ ಕುರಿತು ಆದೇಶವಿರುವುದರಿಂದ ನರೇಗಾ ಕೂಲಿಕಾರರನ್ನು ಮನೆ ಮನೆಗೆ ಸಂಪರ್ಕಿಸಿ ಸಕ್ರಿಯವಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಿದರು.

ತಾಲೂಕಿನ 19 ಗ್ರಾಮ ಪಂಚಾಯತಿಗಳ ಮಟ್ಟದಲ್ಲಿ ಮನರೇಗಾ ಸಿಬ್ಬಂದಿಗಳಾದ ಗ್ರಾಮ ಕಾಯಕ ಮಿತ್ರ, ಬಿಎಫ್‌ಟಿ, ತಾಂತ್ರಿಕ ಸಹಾಯಕರಿಗೆ ಇ ಕೆವೈಸಿ ಕುರಿತು ತರಬೇತಿ ನೀಡಲಾಗಿದೆ. ಗ್ರಾಪಂಗಳ ಇತರ ಸಿಬ್ಬಂದಿಗಳನ್ನು ಬಳಸಿಕೊಂಡು

ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯ ತುರ್ತಾಗಿ ನಡೆಯಲಿ ಎಂದರು.

ನರೇಗಾ ತಾಂತ್ರಿಕ ಸಹಾಯಕರು ಕೃಷಿ ಇಲಾಖೆ ಅಡಿಯ ಕೃಷಿ ಹೊಂಡ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಿ ಕೂಲಿಕಾರರಿಗೆ ಉದ್ಯೋಗ ನೀಡಲು ಸೂಚಿಸಿ ಇದರಿಂದ ಮಾನವ ದಿನಗಳ ಸೃಜನೆಯು ಸಾಧ್ಯವಾಗಲಿದೆ ಹಾಗಾಗಿ ಆ ನಿಟ್ಟಿನ ಕಡೆಯು ಗಮನಹರಿಸಿ ಎಂದು ತಿಳಿಸಿದರು‌. ಚಾಲ್ತಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಹೊಸ ಕಾಮಗಾರಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕೂಲಿಕಾರರಿಗೆ ಉದ್ಯೋಗ ನೀಡಲು ಗಮನಹರಿಸಲು ತಿಳಿಸಿದರು‌. 2026-27ನೇ ನರೇಗಾ ಕ್ರಿಯಾಯೋಜನೆಗೆ ಈಗಾಗಲೇ ಸುತ್ತೋಲೆ ಬಂದಿದ್ದು, ಕ್ರಿಯಾಯೋಜನೆ ಸಿದ್ಧಪಡಿಸುವ ಕಾರ್ಯವು ನಡೆಯಲಿ ಎಂದರು.

ಈ ವೇಳೆ ಟಿಸಿ ಪ್ರವೀಣ ಸೂಡಿ, ಟಿಎಂಐಎಸ್ ಬಸವರಾಜ ಮಣ್ಣಮ್ಮನವರ, ತಾಂತ್ರಿಕ ಸಹಾಯಕರು, ಬಿಎಫ್ ಟಿ ಇದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande