ಸಿರುಗುಪ್ಪ, 17 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜೆಸ್ಕಾಂ ಸಿರುಗುಪ್ಪ ಉಪ-ವಿಭಾಗ ಕಚೇರಿಯಲ್ಲಿ ನಾಳೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ರವರೆಗೆ ಗ್ರಾಹಕರ ಕುಂದುಕೊರತೆ ಸಭೆ ನಡೆಯಲಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜೆಸ್ಕಾಂನ ಸಿರಗುಪ್ಪ ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು, ಎಲ್ಲಾ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಈ ಮೂಲಕ ಕೊರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್