ಮಹಾರಾಷ್ಟ್ರದ ನಂದೂರ್ಬಾರ್‌ನಲ್ಲಿ ದುರ್ಘಟನೆ : ವಾಹನ ಉರುಳಿ ಬಿದ್ದು ಎಂಟು ಮಂದಿ ಸಾವು
ಮುಂಬಯಿ, 18 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಷ್ಟ ಪರ್ವತ ಯಾತ್ರೆಗೆ ತೆರಳುತ್ತಿದ್ದ ಭಕ್ತರ ವಾಹನ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಚಂದ್ರಶಾಲಿ ಘಾಟ್‌ನಲ್ಲಿ ಉರುಳಿ ಬಿದ್ದು ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗ
Accident


ಮುಂಬಯಿ, 18 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅಷ್ಟ ಪರ್ವತ ಯಾತ್ರೆಗೆ ತೆರಳುತ್ತಿದ್ದ ಭಕ್ತರ ವಾಹನ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಚಂದ್ರಶಾಲಿ ಘಾಟ್‌ನಲ್ಲಿ ಉರುಳಿ ಬಿದ್ದು ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸುಮಾರು 40 ಜನರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಸರಕು ವಾಹನವು ಘಾಟ್ ಪ್ರದೇಶ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಉರುಳಿಬಿತ್ತು. ಹಲವಾರು ಮಂದಿ ವಾಹನದ ಕೆಳಗೆ ಸಿಲುಕಿಕೊಂಡಿದ್ದರು.

ಸ್ಥಳೀಯ ಗ್ರಾಮಸ್ಥರು ಮತ್ತು ಪೊಲೀಸರು ಸೇರಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ತಲೋಡಾ ಉಪ-ಜಿಲ್ಲಾ ಆಸ್ಪತ್ರೆ ಮತ್ತು ನಂದೂರ್ಬಾರ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತರು ಮತ್ತು ಗಾಯಾಳುಗಳಲ್ಲಿ ಹೆಚ್ಚಿನವರು ನಂದೂರ್ಬಾರ್ ಜಿಲ್ಲೆಯ ಶಹಾದಾ ತಾಲ್ಲೂಕಿನ ಭುರತಿ ಮತ್ತು ವೈಜಲಿ ಗ್ರಾಮಗಳವರು ಎಂದು ಗುರುತಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ.

ಪ್ರತಿ ವರ್ಷ ಧಂತೇರಸ್ ಹಬ್ಬದ ಸಮಯದಲ್ಲಿ ನಡೆಯುವ ಅಷ್ಟ ಪರ್ವತ ಯಾತ್ರೆ ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಗುಜರಾತ್‌ನಿಂದ ಸಾವಿರಾರು ಭಕ್ತರನ್ನು ಆಕರ್ಷಿಸುತ್ತದೆ. ಸತ್ಪುರ ಪರ್ವತ ಶ್ರೇಣಿಯಲ್ಲಿರುವ ಸುಮಾರು 4,300 ಅಡಿ ಎತ್ತರದ ಅಷ್ಟಂಬ ಪರ್ವತ ಶಿಖರದ ಅಶ್ವತ್ಥಾಮ ದಂತಕಥೆಯ ಹಿನ್ನೆಲೆಯೊಂದಿಗೆ ಈ ಯಾತ್ರೆ ಪ್ರಸಿದ್ಧವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande