ಗದಗ, 18 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದೇಶದ ಅಭಿವೃದ್ಧಿಯಲ್ಲಿ ಪಂಚಾಯತ್ಗಳ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓಗಳು ಕ್ರಿಯಾತ್ಮಕವಾಗಿ ಕೆಲಸ ನಿರ್ವಹಿಸಬೇಕು ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿಂದು ಮಾನವ ಅಭಿವೃದ್ಧಿ ಸೂಚ್ಯಂಕ ಹಾಗೂ ಸುಸ್ಥಿತ ಅಭಿವೃದ್ಧಿ ಗುರಿಗಳ ಕುರಿತು ಜರುಗಿದ ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗದಗ ಜಿಲ್ಲೆಯು ಹಲವಾರು ಮಹತ್ವದ ಯೋಜನೆ ಹಾಗೂ ಯೋಚನೆಗಳಿಗೆ ಸರ್ಕಾರಕ್ಕೆ ಮಾರ್ಗದರ್ಶಿಯಾಗಿದೆ. ಗ್ರಾಮದ ಕಟ್ಟಕಡೆಯ ವ್ಯಕ್ತಿ ಶುದ್ಧ ಕುಡಿಯುವ ನೀರು ಸಿಗಬೇಕೆಂದು ಸರ್ಕಾರದ ಆಶಯವಾಗಿತ್ತು. ಈ ಯೋಜನೆಯನ್ನು ಪಂಚಾಯತಿ, ಗ್ರಾಮಗಳಲ್ಲಿ ಯಶಸ್ವಿಯಾಗಿ ಅನುಷ್ಟಾನ ಮಾಡಲಾಯಿತು. ಸದ್ಯ ಕರ್ನಾಟಕದಲ್ಲಿ 20,000 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ಸಾಧ್ಯವಾಗಿದೆ. ಇದು ಗದಗ ಜಿಲ್ಲೆಯಿಂದ ಆರಂಭವಾದ ಯೋಜನೆ ಅಭೂತಪೂರ್ವ ಯಶಸ್ವಿಯಾಗಿದ್ದು ನಮ್ಮ ಹೆಮ್ಮೆ ಎಂದರು.
ಶುದ್ಧ ಕುಡಿಯುವ ನೀರು ಮಾನವ ಹಕ್ಕಾಗಬೇಕು ಎಂದು ಪ್ರತಿಪಾದಿಸಿದ ಸಚಿವ ಎಚ್.ಕೆ.ಪಾಟೀಲ ಅವರು ಇದಕ್ಕಾಗಿ ಪ್ರಯತ್ನ ನಡೆದಿದೆ ಎಂದರು. ಬಡಜನರ ಬದುಕಿನ ಗುಣಮಟ್ಟ ಉನ್ನತೀಕರಿಸಬೇಕು. ಅಭಿವೃದ್ಧಿಯಲ್ಲಿ ಜಿಲ್ಲೆಯ ಹಲವಾರು ಪಂಚಾಯತ್ಗಳು ರಾಷ್ಟçಮಟ್ಟದ ಮನ್ನಣೆಗೆ ಪಾತ್ರವಾಗಿರುವುದು ಸಂತಸದ ವಿಷಯ ಎಂದು ಹೇಳಿದರು.
ಪ್ರಭುವಿನೆಡೆಗೆ ಪ್ರಭುತ್ವ ಎಂಬ ಕಾರ್ಯಕ್ರಮವನ್ನು ಅಗಸ್ಟ 15 ರಂದು ಗದಗನಲ್ಲಿ ಆರಂಭಿಸಲಾಗಿದೆ. ಸಾರ್ವಜನಿಕರು ತಮ್ಮ ದೂರು ಅಹವಾಲುಗಳನ್ನು ಪ್ರ.ಪ್ರ. ಯಂತ್ರದಲ್ಲಿ ದಾಖಲಿಸುವ ಮೂಲಕ ಶೀಘ್ರ ಪರಿಹಾರ ಕಂಡುಕೊಳ್ಳಲು ಉತ್ತಮ ಮಾರ್ಗವಾಗಿದೆ. ಸಾರ್ವಜನಿಕರು ಹೆಚ್ಚು ಹೆಚ್ಚು ಸದ್ಭಳಕೆಯನ್ನು ಪ್ರ.ಪ್ರ.ಯಂತ್ರದ ನೆರವನ್ನು ಪಡೆಯಬೇಕೆಂದರು. ಸಾರ್ವಜನಿಕರ ಅಹವಾಲುಗಳಿಗೆ ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುತ್ತಿದೆ. ಇದೊಂದು ಮಾದರಿ ಕಾರ್ಯಕ್ರಮವಾಗಿದೆ . ಮುಂದಿನ ದಿನಮಾನಗಳಲ್ಲಿ ಇನ್ನಷ್ಟು ವಿಸ್ತರಿಸುವ ಯೋಜನೆಯಿದೆ ಎಂದು ತಿಳಿಸಿದರು.
ಪಂಚ ಗ್ಯಾರಂಟಿ ಯೋಜನೆಯ ಪ್ರಶಂಸೆ : ರಾಜ್ಯ ಸರ್ಕಾರದ ಅನ್ನಭಾಗ್ಯ, ಗೃಹಲಕ್ಷಿö್ಮÃ, ಗೃಹ ಜ್ಯೋತಿ, ಶಕ್ತಿ, ಯುವನಿಧಿ ಯೋಜನೆಗಳ ಅನುಷ್ಟಾನದಿಂದ ಬಡತನ ನಿರ್ಮೂಲನೆಯಾಗಿದೆ. ಬಡಜನರ ಬದುಕನ್ನು ಹಸನಾಗಿಸಲು ಪಂಚ ಗ್ಯಾರಂಟಿ ಯೋಜನೆಗಳು ಮುಖ್ಯ ಪಾತ್ರ ವಹಿಸಿವೆ. ಗದಗ ಮತಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆಯ ಗುರಿ 99.2 % ರಷ್ಟು ಸಾದಿಸಲಾಗಿದೆ. ಜಿಲ್ಲೆಯಲ್ಲಿ 99.4 % ರಷ್ಟು ಸಾಧನೆಯಾಗಿದೆ. ಪಂಚ ಗ್ಯಾರಂಟಿಗಳಿAದ ಪ್ರತಿ ಕುಟುಂಬಕ್ಕೆ ವಾರ್ಷಿಕವಾಗಿ 60,000 ಆರ್ಥಿಕ ಸೌಲಭ್ಯ ದೊರೆಯುತ್ತಿದ್ದು ಬಡತನ ಮುಕ್ತ ಹಾಗೂ ಆರ್ಥಿಕ ಸಬಲೀಕರಣದತ್ತ ದಿಟ್ಟ ಹೆಜ್ಜೆ ಸರ್ಕಾರ ಇಟ್ಟಿದೆ ಎಂದು ನುಡಿದರು.
ಜಿಲ್ಲೆಯಲ್ಲಿಯ ಶಾಲೆಗಳ ಮೂಲಭೂತ ಸೌಲಭ್ಯ, ಶೌಚಾಲಯಗಳ ಸ್ವಚ್ಛತೆ ಕುರಿತು ಆಯಾ ವ್ಯಾಪ್ತಿಯ ಪಿಡಿಓಗಳು, ಅಧ್ಯಕ್ಷ, ಉಪಾಧ್ಯಕ್ಷರುಗಳು ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಬೇಕು. ಶೌಚಾಲಯಗಳ ಸ್ಥಿತಿಗತಿ ವರದಿಯನ್ನು ಜಿಲ್ಲಾ ಪಂಚಾಯತ್ಗೆ ಸಲ್ಲಿಸಬೇಕು. ಬರುವ ಪ್ರಸ್ತಾವನೆಗಳನ್ನು ಮೇಲಿನ ಹಂತಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಕರ್ಮಯೋಗಿ ಮಿಷನ್ದ ಡಾ. ಬಾಲಸುಬ್ರಹ್ಮಣ್ಯಂ ಅವರು ಮಾನವ ಅಭಿವೃದ್ಧಿ ಸೂಚ್ಯಂಕ ಹಾಗೂ ಸುಸ್ಥಿತ ಅಭಿವೃದ್ಧಿ ಗುರಿಗಳ ಕುರಿತು ಉಪನ್ಯಾಸ ನೀಡಿದರು. ದೇಶದ ಪ್ರಜೆಗಳ ಆರೋಗ್ಯ ವ್ಯವಸ್ಥೆ, ಶಿಕ್ಷಣ ವ್ಯವಸ್ಥೆ ಅಭಿವೃದ್ಧಿ ಪಡಿಸುವುದು ಮಾನವ ಅಭಿವೃದ್ಧಿ ಸೂಚ್ಯಂಕದ ಪ್ರಮುಖ ಅಂಶಗಳಾಗಿವೆ. ಮಗು ಹುಟ್ಟಿದಾಗ ಆರೋಗ್ಯಕರವಾಗಿ, ಪ್ರಜ್ಞಾವಂತನಾಗಿ, ಕೌಶಲ್ಯತೆಯಿಂದ ವಿಕಸನ ಹೊಂದಿದರೆ ನಿಜವಾದ ಅಭಿವೃದ್ಧಿಯಾದಂತೆಯೇ. ವಿಕಸಿತ ಪಂಚಾಯತ್ ಕ್ರೋಢೀಕರಿಸಿದರೆ ವಿಕಸಿತ ಭಾರತವಾಗುತ್ತದೆ. ಮಹಾತ್ಮಾ ಗಾಂಧೀಜಿಯವರು ಕಂಡ ಗ್ರಾಮೀಣಾಭಿವೃದ್ಧಿಯ ಕನಸು ನನಸಾಗಬೇಕು. ಸಂಪನ್ಮೂಲಗಳ ಕ್ರೋಢೀಕರಣ ವ್ಯವಸ್ಥೆ, ಆಡಳಿತದ ವ್ಯವಸ್ಥೆಯಲ್ಲಿ ಎದುರಾಗುವ ತೊಂದರೆಗಳು, ಸಮಸ್ಯೆಗಳು ಹಾಗೂ ತೀರ್ಮಾನ ಕೈಗೊಳ್ಳುವುದರ ಕುರಿತು ವಿವರವಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಡಿ.ಆರ್.ಪಾಟೀಲ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ರಾಜೂರ, ಸಿದ್ಧು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಶಕುಂತಲಾ ಅಕ್ಕಿ, ಜೆ.ಕೆ.ಜಮಾದಾರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ ಸೇರಿದಂತೆ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಪಿಡಿಓಗಳು, ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP