ಅ.೨೧ರಂದು ಪೊಲೀಸ್ ಹುತಾತ್ಮ ದಿನಾಚರಣೆ ; ರಾಜನಾಥ ಸಿಂಗ್ ಭಾಗಿ
ನವದೆಹಲಿ, 19 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಕ್ಟೋಬರ್ 21 ರಂದು ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆಯುವ ಪೊಲೀಸ್ ಸ್ಮರಣಾರ್ಥ ದಿನದ ರಾಷ್ಟ್ರೀಯ ಸಮಾರಂಭದಲ್ಲಿ ಅಧ್ಯಕ
Rajnath Singh


ನವದೆಹಲಿ, 19 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗೆ ಗೌರವ ಸಲ್ಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಅಕ್ಟೋಬರ್ 21 ರಂದು ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆಯುವ ಪೊಲೀಸ್ ಸ್ಮರಣಾರ್ಥ ದಿನದ ರಾಷ್ಟ್ರೀಯ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ದಿನವನ್ನು 1959ರ ಅಕ್ಟೋಬರ್ 21ರಂದು ಲಡಾಖ್‌ನ ಹಾಟ್‌ ಸ್ಪ್ರಿಂಗ್ಸ್‌ನಲ್ಲಿ ಚೀನೀ ದಾಳಿಯಲ್ಲಿ ಹುತಾತ್ಮರಾದ ಹತ್ತು ವೀರ ಪೊಲೀಸರ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ.

ಚಾಣಕ್ಯಪುರಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಸಿಎಪಿಎಫ್ ಹಾಗೂ ದೆಹಲಿ ಪೊಲೀಸರ ಜಂಟಿ ಮೆರವಣಿಗೆ ನಡೆಯಲಿದೆ. ಸಚಿವರು ಸ್ಮಾರಕಕ್ಕೆ ಪುಷ್ಪಾರ್ಪಣೆ ಮಾಡಿ ಹುತಾತ್ಮರಿಗೆ ಗೌರವ ಸಲ್ಲಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande