ಬೆಂಗಳೂರು, 02 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧ ಮುಂಭಾಗ ಆಯೋಜಿಸಿದ್ದ 71ನೇ ವನ್ಯಜೀವಿ ಸಪ್ತಾಹಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ಮಲೆ ಮಹದೇಶ್ವರ, ಮಧುಗಿರಿ, ಬಂಡೀಪುರದಲ್ಲಿ ವನ್ಯಜೀವಿಗಳ ದುರ್ಘಟನೆಯು ನಮ್ಮನ್ನು ನೋವಿನಿಂದ ತುಂಬಿಸಿದೆ, ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಪ್ರಕೃತಿ ಸಂರಕ್ಷಣೆ ನಮ್ಮ ಕರ್ತವ್ಯ ಜನರಲ್ಲಿ ಜಾಗೃತಿ ಮೂಡಿಸುವುದು ಸಪ್ತಾಹದ ಉದ್ದೇಶ. ಗಾಂಧೀ ಜಯಂತಿಯ ದಿನ, ಪ್ರಕೃತಿ, ಪರಿಸರ ಉಳಿಸುವ ಮಹತ್ವವನ್ನು ನೆನಪಿಸಿಕೊಳ್ಳೋಣ, ದೀಪಾವಳಿಯಲ್ಲಿ ಪಟಾಕಿ ತ್ಯಜಿಸಿ ಅಥವಾ ಹಸಿರು ಪಟಾಕಿ ಬಳಸಿ, ಮಕ್ಕಳ ಆರೋಗ್ಯ ಮತ್ತು ಉತ್ತಮ ಪರಿಸರಕ್ಕಾಗಿ ಕೊಡುಗೆ ನೀಡೋಣ ಎಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa