ಗಾಂಧೀಜಿಯವರ ಮಹಾನ್ ಸ್ವರೂಪ ನಮ್ಮ ದೇಶಕ್ಕೆ ಬೆಳಕು : ಡಿ.ಕೆ.ಶಿವಕುಮಾರ್
ಬೆಂಗಳೂರು, 02 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗಾಂಧೀಜಿಯವರ ಮಹಾನ್ ಸ್ವರೂಪ ನಮ್ಮ ದೇಶಕ್ಕೆ ಬೆಳಕಾಗಿದೆ. ನಾವೆಲ್ಲರೂ ಗಾಂಧೀಜಿಯವರನ್ನು ಸ್ಮರಿಸೋಣ, ಅವರ ಆಶಯಗಳನ್ನು ಉಳಿಸೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಷ್ಟಪಿತ ಮಹಾತ್ಮ ಗಾಂಧೀಜಿಯವರ ಹಾಗೂ
Dks


ಬೆಂಗಳೂರು, 02 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗಾಂಧೀಜಿಯವರ ಮಹಾನ್ ಸ್ವರೂಪ ನಮ್ಮ ದೇಶಕ್ಕೆ ಬೆಳಕಾಗಿದೆ. ನಾವೆಲ್ಲರೂ ಗಾಂಧೀಜಿಯವರನ್ನು ಸ್ಮರಿಸೋಣ, ಅವರ ಆಶಯಗಳನ್ನು ಉಳಿಸೋಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ರಾಷ್ಟಪಿತ ಮಹಾತ್ಮ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಂದು ಪವಿತ್ರ ದಿನ. ಇದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿಯವರ ಜನ್ಮ ದಿನಾಚರಣೆ, ಮತ್ತು ವಿಜಯದಶಮಿಯ ಶುಭ ದಿನ ಕೂಡ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರ ಜನ್ಮದಿನ. ದುರ್ಗೆ ಎಂದರೆ ಶಕ್ತಿ, ಗಾಂಧಿ ಎಂದರೆ ಶಾಂತಿ. ಎಲ್ಲರಿಗೂ ಶಕ್ತಿ ಮತ್ತು ಶಾಂತಿ ಸಿಗಲಿ ಎಂದು ಕಾಂಗ್ರೆಸ್ ಪಕ್ಷದ ವತಿಯಿಂದ ನಾನು ಪ್ರಾರ್ಥಿಸುತ್ತೇನೆ ಎಂದರು.

ನಮ್ಮ ದೇಶದ ಯುವಕರಿಗೆ, ವಿದ್ಯಾರ್ಥಿಗಳಿಗೆ, ಜನತೆಗೆ ಗಾಂಧೀಜಿಯವರ ತತ್ವ, ಆದರ್ಶಗಳು ಹಾಗೂ ಗಾಂಧೀಜಿಯವರಿಂದ ಈ ದೇಶಕ್ಕೆ ಏನು ಉಪಯೋಗವಾಯಿತು ಎಂಬುದರ ಬಗ್ಗೆ ತಿಳಿಸಲು, ಮತ್ತು ಇವೆಲ್ಲವನ್ನೂ ಕೇವಲ ಪುಸ್ತಕದಲ್ಲಿ ಓದುವುದಲ್ಲದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರಿಗೆ ಅರಿವು ಮೂಡಿಸಲು, ಗಾಂಧೀಜಿಯವರು ಕಾಂಗ್ರೆಸ್‌ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವದ ಹಿನ್ನೆಲೆಯಲ್ಲಿ ನಮ್ಮ ಜಿ.ಸಿ. ಚಂದ್ರಶೇಖರ್ ಅವರ ನೇತೃತ್ವದಲ್ಲಿ 'ಗಾಂಧಿ ಜ್ಯೋತಿ' ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಅದನ್ನು ರಾಜ್ಯದ ಪ್ರತಿಯೊಂದು ಕ್ಷೇತ್ರಕ್ಕೆ ಕಳುಹಿಸಬೇಕೆಂದು ಯೋಜನೆ ರೂಪಿಸಿದ್ದೇವೆ. ಇಂದು ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಜನ್ಮ ದಿನ ಸಹ ಇದ್ದು, ಅವರು ಒಬ್ಬ ಧೀಮಂತ ನಾಯಕರು, ಅವರ ಸರಳತೆ ನಮಗೆ ಎಂದೆಂದಿಗೂ ಸ್ಫೂರ್ತಿ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande