ರಾಯಚೂರು, 02 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ಇಲಾಖೆಗಳ ಸಹಯೋಗದಲ್ಲಿ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತ್ಯುತ್ಸವ ಮತ್ತು ಲಾಲ್ ಬಹದ್ದೂರ ಶಾಸ್ತ್ರಿಜಿ ಅವರ ಜಯಂತ್ಯುತ್ಸವ ಆಚರಿಸಲಾಯಿತು.
ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿರುವ
ಮಹಾತ್ಮ ಗಾಂಧೀಜಿಯವರ ಪುತ್ಥಳಿಯ ಸುತ್ತಲು ವಿದ್ಯುದೀಪಗಳು ಮತ್ತು ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು.
ಕಲಾವಿದರಾದ ನಬೀಬೇಗ, ಮಹಾಲಕ್ಷಿö್ಮ, ವಿಜಯಕುಮಾರ, ಸುಧಾಕರ, ಮಹಮ್ಮದ್ ಅನ್ವರ್ ಮಾಡಗಿರಿ ಅವರನ್ನೊಳಗೊಂಡ ಕಲಾವಿದರ ತಂಡದವರು ಬೆಳಗ್ಗೆ 8 ಗಂಟೆಯಿ0ದ ಗಾಂಧೀಜಿಯವರ ಪ್ರಿಯ ಗೀತೆಗಳನ್ನು ಪ್ರಸ್ತುತಪಡಿಸಿದರು.
ಬಳಿಕ ಕಾರ್ಯಕ್ರಮಕ್ಕೆ, ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ ಅವರು ದೀಪ ಬೆಳಗಿಸಿ ಚಾಲನೆ ನೀಡಿದರು.
ನಗರಸಭೆ ಅಧ್ಯಕ್ಷರು, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಐಎಎಸ್ ಪ್ರೊಬೇಷನರಿ ಅಧಿಕಾರಿ ಪುರುರಾಜ್ಸಿಂಗ್ ಸೋಲಂಕಿ, ಅಪರ ಜಿಲ್ಲಾಧಿಕಾರಿ ಶಿವಾನಂದ, ತಹಸೀಲ್ದಾರ ಸುರೇಶ ವರ್ಮಾ, ಪಾಲಿಕೆಯ ಉಪ ಆಯುಕ್ತರಾದ ಸಂತೋಷರಾಣಿ ಎಂ ಹಾಗೂ ಇನ್ನೀತರರು ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಇದೆ ವೇಳೆ, ಲಕ್ಷಿಮದೇವಿ, ಸುನಿತಾ, ನಾಗೇಶ್ವರಿ, ಸಯ್ಯದ್ ಖಾದ್ರಿ ಕೆ.ಇ., ಕುಮಾರ ವಿದ್ಯಾಸಾಗರ ಅವರು ಸರ್ವಧರ್ಮ ಪ್ರಾರ್ಥನೆ ಪ್ರಸ್ತುತಪಡಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ನನ್ನ ಜೀವನವೇ ನನ್ನ ಸಂದೇಶ ಎಂದು ತಿಳಿಸಿದ ಮಹಾತ್ಮ ಗಾಂಧೀಜಿಯವರು ಅತ್ಯಂತ ಸರಳವಾಗಿ ಬದುಕಿ ಬಹು ದೊಡ್ಡ ಸಾಮಾಜಿಕ ಸಂದೇಶ ನೀಡಿದರು. ಅವರು ನೀಡಿದ ರಾಜಕೀಯ, ಸಾಮಾಜಿಕ, ಆರ್ಥಿಕ ಮೌಲ್ಯಗಳು ಸದಾಕಾಲ ಪ್ರಸ್ತುತವಾಗಿವೆ ಎಂದು ತಿಳಿಸಿದರು.
ರಾಯಚೂರಿನ ಚಿಂತಕರು ಮತ್ತು ವಿಮರ್ಶಕರಾದ ಪರಮೇಶ್ವರಪ್ಪ ಸಾಲಿಮಠ ಅವರು ಉಪನ್ಯಾಸ ನೀಡಿದರು.
ಬಹುಮಾನ ವಿತರಣೆ: ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯಿಂದ ನಡೆಸಿದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಇದೆ ವೇಳೆ ಬಹುಮಾನ ವಿತರಿಸಲಾಯಿತು.
ಸಮಾರಂಭದಲ್ಲಿ ಭಾರತ ಸೇವಾದಳದ ವಿದ್ಯಾಸಾಗರ, ಸ್ಕೌಟ್ಸ್ ಮತ್ತು ಗೈಡ್ಸನ ಆರ್ ಎಚ್ ಸಾಗರ, ಬಿಸಿಎಂ ಅಧಿಕಾರಿ ಸುನೀತಾ ಘಟಕಾಂಬಳೆ, ಮಹಾನಗರ ಪಾಲಿಕೆಯ ಕೃಷ್ಣ ಕಟ್ಟಿಮನಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಕಾರ್ಯದರ್ಶಿ ಡಾ.ದಂಡಪ್ಪ ಬಿರಾದಾರ ಹಾಗೂ ಇನ್ನೀತರರು ಉಪಸ್ಥಿತರಿದ್ದರು. ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಗವಿಸಿದ್ದಪ್ಪ ಅವರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್