ಶಿವಮೊಗ್ಗ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ಸಮೀಪದ ಆಡುಕಟ್ಟೆಯ ಜೋಗಿನ ಮಠದ ಬಳಿ ಪ್ರವಾಸಿಗರ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು 18 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಗಾಯಾಳುಗಳನ್ನು ರತ್ನಮ್ಮ (50), ಗಮ್ಯಶ್ರೀ (11), ಸುಶೀಲಾ (45), ನಾರಾಯಣಪ್ಪ (72), ಸುಮಿತ್ ಕುಮಾರ್ (38), ಸುಬ್ಬಲಕ್ಷ್ಮಿ (29), ರೋಹಿತ್ (20), ನವೀನ್ (12), ಸಾವಿತ್ರಿ (36), ವಿದ್ಯಾರಾಣಿ (34), ಜ್ಯೋತಿ (32), ಪುಷ್ಪಾವತಿ (48), ಲಕ್ಷ್ಮಿ (50), ಗಂಗಮ್ಮ (65), ಮದನ್ (14), ಗೌತಮ್ (30), ಶಕುಂತಲಾ (34) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಕಾರ್ಗಲ್ ಠಾಣೆ ಪೊಲೀಸರು ರಕ್ಷಿಸಿ ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ 45 ಜನ ಪ್ರವಾಸಿಗರ ತಂಡ ಖಾಸಗಿ ಬಸ್ನಲ್ಲಿ ಪ್ರವಾಸಕ್ಕೆ ತೆರಳಿದ್ದು, ಸಿಗಂದೂರು ಚೌಡೇಶ್ವರಿ ದೇವಾಲಯದ ದರ್ಶನದ ಬಳಿಕ ವಡನಬೈಲ್ ಪದ್ಮಾವತಿ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಬಸ್ನ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣವೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa