ಬೆಂಗಳೂರು, 21 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಬೆಂಗಳೂರಿನಲ್ಲಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭ ಕೋರಿದರು.
ಭೇಟಿ ವೇಳೆ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸದನದ ಒಳಗೆ ಹಾಗೂ ಹೊರಗೆ ಮತ್ತಷ್ಟು ಪರಿಣಾಮಕಾರಿಯಾಗಿ ಯಶಸ್ವಿ ಹೋರಾಟ ರೂಪಿಸುವ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲುವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa