ರಾಜ್ಯದ ಎಲ್ಲ ದೇವಾಲಯಗಳಲ್ಲಿ ಬಲಿಪಾಡ್ಯಮಿ ಗೋಪೂಜೆ : ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ
ಬೆಂಗಳೂರು, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಯ ಆಧೀನದಲ್ಲಿರುವ ದೇವಾಲಯಗಳಲ್ಲಿ ಬುಧವಾರ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಸರ್ಕಾರದ ಈ ನಿರ್ದೇಶನದಂತೆ ಪ್ರತಿ ದೇವಾಲಯದಲ್ಲೂ ಸಾಂಪ್ರದಾಯ
Notification


ಬೆಂಗಳೂರು, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೀಪಾವಳಿ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಯ ಆಧೀನದಲ್ಲಿರುವ ದೇವಾಲಯಗಳಲ್ಲಿ ಬುಧವಾರ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಈ ನಿರ್ದೇಶನದಂತೆ ಪ್ರತಿ ದೇವಾಲಯದಲ್ಲೂ ಸಾಂಪ್ರದಾಯಿಕ ವಿಧಿವಿಧಾನಗಳಂತೆ ಗೋಮಾತೆಗೆ ಪೂಜೆ ಸಲ್ಲಿಸಿ, ಭಕ್ತರ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ.

ಬಲಿಪಾಡ್ಯಮಿ ಹಬ್ಬವನ್ನು ಲಕ್ಷ್ಮೀ ಪೂಜೆಯ ನಂತರದ ದಿನವಾಗಿ ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಯ ಪ್ರಕಾರ ಈ ದಿನ ಮಹಾಬಲಿ ಚಕ್ರವರ್ತಿ ಪಾತಾಳದಿಂದ ಭೂಮಿಗೆ ಭೇಟಿ ನೀಡುತ್ತಾರೆ ಎಂಬ ನಂಬಿಕೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande