ವಾಲ್ಮೀಕಿ ಸಮಾಜದ ಕುರಿತು ರಮೇಶ ಕತ್ತಿ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ‌ ಖಂಡನೆ
ಬೆಳಗಾವಿ, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ಮಾಜಿ ಸಂಸದ ರಮೇಶ ಕತ್ತಿ ನೀಡಿರುವ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೇಲ್ನೋಟಕ್ಕೆ ಅದು ನಿಜವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ‌
ವಾಲ್ಮೀಕಿ ಸಮಾಜದ ಕುರಿತು ರಮೇಶ ಕತ್ತಿ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ‌ ಖಂಡನೆ


ಬೆಳಗಾವಿ, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿಯಲ್ಲಿ ವಾಲ್ಮೀಕಿ ಬೇಡರ ಸಮುದಾಯದ ಕುರಿತು ಮಾಜಿ ಸಂಸದ ರಮೇಶ ಕತ್ತಿ ನೀಡಿರುವ ಅವಹೇಳನಕಾರಿ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮೇಲ್ನೋಟಕ್ಕೆ ಅದು ನಿಜವಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ಇಂತಹ ಅಸಂವೇದನಾಶೀಲ ಮಾತುಗಳು ಸಮಾಜದ ಸೌಹಾರ್ದತೆ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ಗಂಭೀರ ಧಕ್ಕೆ ತರುತ್ತವೆ. ಆದ್ದರಿಂದ, ಕಾನೂನಿನ ಪ್ರಕಾರ ತನಿಖೆಯನ್ನು ಕೈಗೊಂಡು ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಜಾತಿಯಂತಹ ವಿಷವನ್ನು ಬೇರುಸಹಿತ ನಿರ್ಮೂಲನೆಗೊಳಿಸಲು ತಮ್ಮ ಜೀವನವನ್ನೇ ಅರ್ಪಿಸಿದ ಮಹಾನ್ ತತ್ವಜ್ಞಾನಿಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ “ಸಮಾನತೆ, ಮಾನವೀಯತೆ ಮತ್ತು ಸಹೋದರತೆ” ಎಂಬ ಸಿದ್ಧಾಂತಗಳೇ ನಮ್ಮ ಮಾರ್ಗ ಮತ್ತು ದಾರಿದೀಪವಾಗಬೇಕು “ನಾ ಹೆಚ್ಚು, ನೀ ಹೆಚ್ಚು” ಎಂಬ ಜಾತಿಯ ವಿಷವಲ್ಲ‌ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande