ನವದೆಹಲಿ, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಾಲ್ಕು ದಿನಗಳ ಕೇರಳ ಭೇಟಿಯು ಇಂದಿನಿಂದ ಆರಂಭವಾಗಲಿದೆ. ಅವರು ಇಂದು ಸಂಜೆ ತಿರುವನಂತಪುರಂಗೆ ಆಗಮಿಸಿ, ನಾಳೆ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ಅಕ್ಟೋಬರ್ 23ರಂದು, ಅವರು ತಿರುವನಂತಪುರದ ರಾಜಭವನದಲ್ಲಿ ಮಾಜಿ ರಾಷ್ಟ್ರಪತಿ ಕೆ.ಆರ್. ನಾರಾಯಣನ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವುದು, ವರ್ಕಲಾದ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಗುರು ಮಹಾಸಮಾಧಿ ಶತಮಾನೋತ್ಸವವನ್ನು ಉದ್ಘಾಟಿಸುವುದು ಮತ್ತು ಪಲೈನಲ್ಲಿರುವ ಸೇಂಟ್ ಥಾಮಸ್ ಕಾಲೇಜಿನ ಪ್ಲಾಟಿನಂ ಜುಬಿಲಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 24ರಂದು ರಾಷ್ಟ್ರಪತಿ ಎರ್ನಾಕುಲಂನ ಸೇಂಟ್ ತೆರೇಸಾ ಕಾಲೇಜಿನ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa