ಲೋಂಗೆವಾಲಾ ಯುದ್ಧ ಸ್ಥಳಕ್ಕೆ ರಾಜನಾಥ ಸಿಂಗ್ ಭೇಟಿ
ಜೈಸಲ್ಮೇರ್, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ರಾಜಸ್ಥಾನದ ಲೋಂಗೆವಾಲಾ ಯುದ್ಧ ಸ್ಥಳಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ನಂತರ ಅವರು ಗಡಿಯಲ್ಲಿರುವ ಸೇನಾ ಸಿಬ್ಬಂದಿಯೊಂದಿಗೆ ಸಂವಹನ ನಡೆಸಿ ಭದ್ರತಾ ಸನ್ನದ್ಧತೆಯನ್ನು ಪರಿಶೀಲಿಸಿದರು.
Rajnath singh


ಜೈಸಲ್ಮೇರ್, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ರಾಜಸ್ಥಾನದ ಲೋಂಗೆವಾಲಾ ಯುದ್ಧ ಸ್ಥಳಕ್ಕೆ ಭೇಟಿ ನೀಡಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು. ನಂತರ ಅವರು ಗಡಿಯಲ್ಲಿರುವ ಸೇನಾ ಸಿಬ್ಬಂದಿಯೊಂದಿಗೆ ಸಂವಹನ ನಡೆಸಿ ಭದ್ರತಾ ಸನ್ನದ್ಧತೆಯನ್ನು ಪರಿಶೀಲಿಸಿದರು.

ಇದೇ ವೇಳೆ ಜೈಸಲ್ಮೇರ್ ಸೇನಾ ಕಂಟೋನ್ಮೆಂಟ್‌ನಲ್ಲಿ ನಡೆಯುವ ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ರಕ್ಷಣಾ ಕಾರ್ಯತಂತ್ರ, ಗಡಿ ಭದ್ರತೆ ಮತ್ತು ಅಗ್ನಿವೀರ ಯೋಜನೆ ಕುರಿತ ಚರ್ಚೆಗಳು ನಡೆಯಲಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande