ರಾಷ್ಟೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಕಠಿಣ ಕ್ರಮದ ಎಚ್ಚರಿಕೆ
ರಾಷ್ಟೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳಿಗೆ ಕಠಿಣ ಕ್ರಮದ ಎಚ್ಚರಿಕೆ
ಚಿತ್ರ ; ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸಂಸದರಾದ ಎಂ ಮಲ್ಲೇಶ್ ಬಾಬು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.


ಕೋಲಾರ, ೨೭ ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೋಲಾರ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಆಮೆ ವೇಗದಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಜನಾಕ್ರೋಶ ವ್ಯಕ್ತವಾಗಿದ್ದು ಜಿಲ್ಲಾಡಳಿತ, ಜನಪ್ರತಿನಿಧಿಗಳಿಗೆ ಅಧಿಕಾರಿಗಳು, ಗುತ್ತಿಗೆದಾರರು ಸ್ಪಂದಿಸಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವಂತೆ ಕೋಲಾರ ಸಂಸದರಾದ ಎಂ ಮಲ್ಲೇಶ್ ಬಾಬು ತಿಳಿಸಿದರು

ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋಲಾರ ಸಂಸದರು ಕೋಲಾರದ ಜನಪ್ರತಿನಿಧಿಗಳ ನೇತೃತ್ವದಲ್ಲಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಕೊಳತೂರು ಜಂಕ್ಷನ್ನಿಂದ ನಂಗಲಿ ಅಂಚಿನಲ್ಲಿ ನಡುವೆ ಸುಗಮ ಸಂಚಾರಕ್ಕೆ ಹೆದ್ದಾರಿ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವುದು ತೊಂದರೆ ತಂದೊಡ್ಡಿದೆ. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಂಸದರು ತಾಕೀತು ಮಾಡಿದರು.

ಬೆಂಗಳೂರು ತಿರುಪತಿ ಹೆದ್ದಾರಿ ಯಲ್ಲಿ ನಂಗಲಿ ರಸ್ತೆವರೆಗೂ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ-೭೫ರಲ್ಲಿ ಕಾಮಗಾರಿಯನ್ನು ೨೦೨೬ರ ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಯೋಜನಾ ನಿರ್ದೇ ಶಕ ಜಯಕುಮಾರ್ ರವರಿಗೆ ಸೂಚಿಸಿದರು.

ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಸುಮಾರು ೧೯ ಕಿಲೋ ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿಯು ೧೬ ಹಳ್ಳಿಗಳ ಮೂಲಕ ಹಾದು ಹೋಗಲಿದೆ. ಸ್ಥಳಿಯರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಕಾಮಗಾರಿ ಕೈಗೊಳ್ಳಬೇಕು ಎಂದು ತಿಳಿಸಿದರು.

ನರಸಾಪುರ ಮುಳಬಾಗಿಲು ಕೋಲಾರ ಬೈಪಾಸ್ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿರುವ ರಸ್ತೆ ಕೆಳ ಸೇತುವೆಗಳಲ್ಲಿ ಬೆಳಕಿನ ವ್ಯವಸ್ಥೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಅಪಘಾತಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ೩೬ ಬ್ಲಾಕ್ಸ್ಪಾಟ್ ಗಳನ್ನು ಗುರುತಿಸಿದ್ದು, ಈ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷತಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು. ಅಪಘಾತ ಸಂದರ್ಭದಲ್ಲಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಈ ವರೆಗೆ ಬಹಳಷ್ಟು ಬಾರಿ ಕಾಮಗಾರಿ ವಿಳಂಬ ಕುರಿತು ಎಚ್ಚರಿಕೆ ನೀಡಿದ್ದಾಗ್ಯೂ ಸಾಕಷ್ಟು ಕ್ರಮ ವಹಿಸಲಾಗಿಲ್ಲ ಎಂದು ಸಂಸದರು

ಅಸಮಾಧಾನ ವ್ಯಕ್ತಪಡಿಸಿದರು.

ಟೇಕಲ್ ರಸ್ತೆಯಲ್ಲಿ ಸರ್ವಿಸ್ ರಸ್ತೆ ವಿಸ್ತರಣೆ ಮಾಡಬೇಕು ಎಂದು ಕೋಲಾರ ಶಾಸಕರು ಕೊತ್ತೂರುಮಂಜುನಾಥ್ ಆಗ್ರಹಿಸಿದರು.

ಎ ಪಿ. ಎಂ ಸಿ ಪ್ರಾಂಗಣದ ಸುತ್ತ ಮುತ್ತ ರಸ್ತೆಗುಂಡಿಗಳು ತುಂಬಾ ಇದ್ದು ಇವುಗಳನ್ನು ಮುಚ್ಚುವುದರ ಜೊತೆಗೆ ಶೀಘ್ರವೇ ರಸ್ತೆ ಕಾಮಗಾರಿಗೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು ಅವರು ಸಭೆಯಲ್ಲಿ ತಿಳಿಸಿದರು.

ಕೋಲಾರ-ತಿರುಪತಿ ಮಾರ್ಗದಲ್ಲಿ ಮುಳಬಾಗಿಲು ಸಮೀಪ ಅಪಘಾತಗಳು ಹೆಚ್ಚಾಗಿದ್ದು ಇದರಿಂದ ಪ್ರಾಣಹಾನಿ ಆಗುತ್ತಿದ್ದು, ಇದನ್ನು ತಡೆಯಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಮುಳಬಾಗಿಲು ಶಾಸಕರಾದ ಸಮೃದ್ಧಿ ಮಂಜುನಾಥ್ ತಿಳಿಸಿದರು.

ಮುಳಬಾಗಿಲು ರಾಷ್ಟ್ರೀಯ ಹೆದ್ದಾರಿ ಯಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅನೇಕ ರಸ್ತೆಗುಂಡಿಗಳಿದ್ದು, ಲೋಕೋಪಯೋಗಿ ಇಲಾಖೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಬೆಳ್ಳೂರು, ನರಸಾಪುರ, ಎ ಪಿ ಎಂ ಸಿ, ವಡಗೂರು, ತಂಬಿಹಳ್ಳಿ, ನರಸಿಂಹ ತೀರ್ಥ, ಒಡ್ಡಹಳ್ಳಿ ವರೆಗಿನ ಒಟ್ಟಾರೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಪೆಬ್ರವರಿ ಅಂತ್ಯದ ವೇಳೆಗೆ ಪೂರ್ಣಗೊಳಿಸಿ ವಿದ್ಯುತ್, ಸಿಸಿ ಟಿವಿ, ರಸ್ತೆ ಸುರಕ್ಷಾ ಕ್ರಮಗಳು ಸೇರಿದಂತೆ ಸಮಗ್ರ ರಸ್ತೆ ಅಭಿವೃದ್ಧಿ ಮಾಡಿ ತೋರಿಸಲು ಎಲ್ಲಾ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಡಾ.ಎಂ. ಆರ್. ರವಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳಾದ ವಿಲಾಸ್ ಬ್ರಹ್ಮಾಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ನಿಖಿಲ್, ಪ್ರಮುಖ ಗುತ್ತಿಗೆದಾರರು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.

ಚಿತ್ರ ; ಕೋಲಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಸಂಸದರಾದ ಎಂ ಮಲ್ಲೇಶ್ ಬಾಬು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande