
ಹುಬ್ಬಳ್ಳಿ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ 23 ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ 70 ಧೀಮಂತ ವ್ಯಕ್ತಿಗಳಿಗೆ ಧೀಮಂತ ಸನ್ಮಾನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಪಾಲಿಕೆ ವ್ಯಾಪ್ತಿಯ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವ ಸಂಘ ಸಂಸ್ಥೆಗಳು ಪಾಲಿಕೆ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿರಬೇಕು. ಅರ್ಜಿಯೊಂದಿಗೆ ಸಾಧನೆ ಮಾಡಿದ ಬಗ್ಗೆ ಅಗತ್ಯ ದಾಖಲೆಗಳು ಹಾಗೂ ಕಡ್ಡಾಯವಾಗಿ ತಮ್ಮ ವಿಳಾಸವನ್ನು ದೃಢೀಕರಿಸುವ ದಾಖಲೆಯನ್ನು ಸಲ್ಲಿಸಬೇಕು. ಪ್ರಶಸ್ತಿ ಆಯ್ಕೆಯಲ್ಲಿ ಪಾಲಿಕೆ ನಿರ್ಣಯವೇ ಅಂತಿಮವಾಗಿರುವುದು.
ಅರ್ಜಿಗಳನ್ನು ಪಾಲಿಕೆಯ ಉಪ ಮಹಾಪೌರರ ಕಚೇರಿ ಅಥವಾ ಕಮೀಟಿ ಸದಸ್ಯರ ಮುಖಾಂತರ ಅಥವಾ ಇಮೇಲ್ ವಿಳಾಸ hdmcawards2025@gmail.com ಅಥವಾ ವಾಟ್ಸ್ ಅಪ್ ನಂಬರ್ 8951662103 ಮೂಲಕ ಅಕ್ಟೋಬರ್ 29 ರಂದು ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 8147923384, 9886088411 ಅಥವಾ ವೆಬ್ ಸೈಟ್ http://hdmc.mrc.gov.in ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಧೀಮಂತ ಸನ್ಮಾನ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಡಾ.ಶ್ರೀಧರ ದಂಡಪ್ಪನವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa