
ಹೊಸಪೇಟೆ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಡಗಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಾಳೆ ಬೆ.10 ಗಂಟೆಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ವಿಜಯನಗರ ವತಿಯಿಂದ ಆರ್ಎಎಂಪಿ ಯೋಜನೆಯಡಿಯಲ್ಲಿ ಇಂಕ್ಯುಬೇಶನ್ ಯೋಜನೆಯ ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಕಾರ್ಯಾಗಾರವು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳಲ್ಲಿ ಹಣಕಾಸು, ತಾಂತ್ರಿಕತೆ ಮತ್ತು ಮಾರ್ಗದರ್ಶನ ಬೆಂಬಲದ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಹಾಗೂ ಇಂಕ್ಯುಬೇಶನ್ ಸೌಲಭ್ಯಗಳನ್ನು ಪ್ರದರ್ಶಿಸುತ್ತದೆ. ಯಶಸ್ಸಿನ ಕಥೆಗಳನ್ನು ಹಂಚಿಕೊಳ್ಳುತ್ತದೆ ಮತ್ತು ನೆಟ್ವಕಿರ್ಂಗ್ ತಜ್ಞರು, ಅಧಿಕಾರಿಗಳು ಮತ್ತು ಉದ್ಯಮಿಗಳೊಂದಿಗೆ ಸಂಪರ್ಕ ಸಾಧಿಸಲು ಅವಕಾಶ ಒದಗಿಸಿಕೊಡುತ್ತದೆ. ಆದ್ದರಿಂದ ಆಸಕ್ತಿಯುಳ್ಳ ವಿದ್ಯಾರ್ಥಿಗಳು ಮತ್ತು ಉದ್ದಿಮೆದಾರರು ಪಾಲ್ಗೊಳ್ಳಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್