ರಾಯಚೂರು ಮಹಾನಗರ ಪಾಲಿಕೆಗೆ ರಾಜ್ಯಮಟ್ಟದ ಅತ್ಯುತ್ತಮ ಕಾರ್ಯಕ್ಷಮತೆ ಪ್ರಶಸ್ತಿ ಗರಿ
ರಾಯಚೂರು, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಜೀವನೋಪಾಯ ಅಭಿಯಾನವು ಡೇ-ನಲ್ಮ್ ಅಭಿಯಾನದಡಿ ಪ್ರಕಟಿಸಿದ ಕೌಶಲ ಕರ್ನಾಟಕ ಪ್ರಶಸ್ತಿಗೆ ರಾಯಚೂರು ಮಹಾನಗರ ಪಾಲಿಕೆಯು ಆಯ್ಕೆಯಾಗಿದ್ದು, ಆಯ್ಕೆಯಾದ ಸ್ವಸಹಾಯ ಗುಂಪುಗಳ ಪರವಾಗಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರಿಗ
ರಾಯಚೂರು ಮಹಾನಗರ ಪಾಲಿಕೆಗೆ ರಾಜ್ಯಮಟ್ಟದ ಅತ್ಯುತ್ತಮ ಕಾರ್ಯಕ್ಷಮತೆ ಪ್ರಶಸ್ತಿ ಗರಿ


ರಾಯಚೂರು, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಜೀವನೋಪಾಯ ಅಭಿಯಾನವು ಡೇ-ನಲ್ಮ್ ಅಭಿಯಾನದಡಿ ಪ್ರಕಟಿಸಿದ ಕೌಶಲ ಕರ್ನಾಟಕ ಪ್ರಶಸ್ತಿಗೆ ರಾಯಚೂರು ಮಹಾನಗರ ಪಾಲಿಕೆಯು ಆಯ್ಕೆಯಾಗಿದ್ದು, ಆಯ್ಕೆಯಾದ ಸ್ವಸಹಾಯ ಗುಂಪುಗಳ ಪರವಾಗಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರಿಗೆ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕರು ಅಭಿನಂದನೆ ತಿಳಿಸಿದ್ದಾರೆ.

ರಾಜ್ಯದ ಜಿಲ್ಲೆಗಳಿಂದ ಅತ್ಯುತ್ತಮ ಸಾಧನೆ ಮಾಡಿದ ಸ್ವ-ಸಹಾಯ ಗುಂಪುಗಳ ಪ್ರಸ್ತಾವನೆ ಪರಿಶೀಲಿಸಲಾಗಿ, ನಿಗದಿತ ಅರ್ಹ ಮಾನದಂಡಗಳನ್ವಯ ಪ್ರಕಟಿಸಿದ ಪಟ್ಟಿಯಲ್ಲಿ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಕ್ಕಮಹಾದೇವಿ ಸ್ವಸಹಾಯ ಸಂಘಕ್ಕೆ ಇಡೀ ರಾಜ್ಯದಲ್ಲೇ ಮೂರನೇ ಸ್ಥಾನ ಲಭಿಸಿದೆ. ಮೊದಲ ಸ್ಥಾನವನ್ನು ಶಿವಮೋಗ್ಗ ಜಿಲ್ಲೆ ಪಡೆದುಕೊಂಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಎರಡನೇ ಸ್ಥಾನ ಲಭಿಸಿದೆ.

ಆಯುಕ್ತರು ಹರ್ಷ: ರಾಯಚೂರು ಮಹಾನಗರ ಪಾಲಿಕೆಯು ವೇಗವಾಗಿ ಬೆಳೆಯುತ್ತಿದೆ. ಸ್ವಸಹಾಯ ಸಂಘದ ಕಾರ್ಯಚಟುವಟಿಕೆಗಳಿಗೆ ಪಾಲಿಕೆಯು ಹೆಚ್ಚಿನ ಉತ್ತೇಜನ, ನಿರಂತರ ಮಾರ್ಗದರ್ಶನ ಮತ್ತು ಬೆಂಬಲ ನೀಡಿದೆ ಎಂಬುದಕ್ಕೆ ಈ ಪ್ರಶಸ್ತಿಯೇ ಸಾಕ್ಷಿಯಾಗಿದೆ. ಅಕ್ಕಮಹಾದೇವಿ ಸ್ವಸಹಾಯ ಸಂಘದ ಚಟುವಟಿಕೆಗಳು ಇನ್ನೀತರ ಸ್ವಸಹಾಯ ಸಂಘಗಳಿಗೆ ಸ್ಫೂರ್ತಿಯಾಗಲಿ ಎಂದು ಇದೆ ವೇಳೆ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಪ್ರತಿಕ್ರಿಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande