ಬೆಂಗಳೂರು, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಒಲಂಪಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ ವತಿಯಿಂದ ಹಸಿದವರಿಗೆ ಅನ್ನ ರೋಗಿಗಳಿಗೆ ಆಸರೆ ಎಂಬ ಧ್ಯೇಯ ವಾಕ್ಯದೊಂದಿಗೆ ರೋಗಿಗಳು ಮತ್ತು ಅವರ ಬಂಧುಗಳಿಗೆ ದಿನನಿತ್ಯ ಉಚಿತ ಊಟದ ವ್ಯವಸ್ಥೆ ಹಾಗೂ ವಾಹನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಬಡರೋಗಿಗಳ ಕುಟುಂಬಸ್ಥರಿಗೆ ಮಧ್ಯಾಹ್ನದ ಸಮಯದಲ್ಲಿ ಆಸ್ಪತ್ರೆಯ ಆವರಣದಲ್ಲೇ ಊಟ ಸಿಗುವುದು ಹೆಚ್ಚು ಸಹಾಯಕಾರಿಯಾಗಲಿದೆ. ಇತಂಹ ಸಮಾಜಮುಖಿ ಕಾರ್ಯಕ್ರಮಕ್ಕೆ ಸಂಸ್ಥೆಯರಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಚಿವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa