ವಿಜಯಪುರ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದುರ್ಗಾ ದೇವಿ ಜಾತ್ರೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮಧ್ಯೆ ಜಗಳ ತಾರಕ್ಕೇರಿದ ವೇಳೆ ಪರವಾನಿಗೆ ಹೊಂದಿದ ರಿವಾಲ್ವಾರ್ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ವಿಜಯಪುರ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ನಡೆದಿದೆ.
ರಾಮು ಅಂಕಲಗಿ ಎಂಬಾತನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.
ಗಾಳಿಯಲ್ಲಿನ ಗುಂಡು ಮಹಾರಾಷ್ಟ್ರ ಮೂಲದ ಬಾಲಕಿ ಪಲ್ಲವಿ ತೊಡೆಗೆ ಗುಂಡು ತಗುಲಿದೆ. ಇದರಿಂದ ಬಾಲಕಿ ಗಾಯಗೊಂಡಿದ್ದಾಳೆ. ತಕ್ಷಣವೇ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿದೆ.
ಬಟ್ಟೆ ಒಣಗಿಸಲು ಮನೆಯ ಮೇಲ್ಛಾವಣಿ ಮೇಲೆ ನಿಂತಿದ್ದ ಬಾಲಕಿಗೆ ಗುಂಡು ತಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾಸ್ಪತ್ರೆಗೆ ಎಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಟಿ ಎಸ್ ಸುಲ್ಪಿ ಭೇಟಿ ನೀಡಿದರು. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande