ನಿರಂತರ ವಿದ್ಯುತ್ ಕಲ್ಪಿಸುವಂತೆ ಒತ್ತಾಯ
ಗದಗ, 30 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತಾಂಡಾ ನಿವಾಸಿಗಳಿಗೆ ಮೂಲಭೂತ ಸೌಲಭ್ಯಗಳ ಪೂರೈಕೆಯಲ್ಲಿ ಲೋಪ-ಯಾವುದೇ ದೋಷಗಳಾಗದಂತೆ ನೋಡಿಕೊಳ್ಳಿ ಎಂದು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಚಂದ್ರಶೇಖರ ಬಿ.ಕಂದಕೂರ ತಾಕೀತು ಮಾಡಿದ್ದಾರೆ.
ಫೋಟೋ


ಗದಗ, 30 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತಾಂಡಾ ನಿವಾಸಿಗಳಿಗೆ ಮೂಲಭೂತ ಸೌಲಭ್ಯಗಳ ಪೂರೈಕೆಯಲ್ಲಿ ಲೋಪ-ಯಾವುದೇ ದೋಷಗಳಾಗದಂತೆ ನೋಡಿಕೊಳ್ಳಿ ಎಂದು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಚಂದ್ರಶೇಖರ ಬಿ.ಕಂದಕೂರ ತಾಕೀತು ಮಾಡಿದ್ದಾರೆ.

ತಾಂಡಾ ನಿವಾಸಿಗಳು ದೂರವಾಣಿ ಕರೆ ಮಾಡಿ ಮನವಿ ಮಾಡಿಕೊಂಡ ಗಜೇಂದ್ರಗಡ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ.ಕಂದಕೂರ ಲಕ್ಕಲಕಟ್ಟಿ ತಾಂಡಾಕ್ಕೆ ಭೇಟಿ ನೀಡಿ ತಾಂಡಾ ಗ್ರಾಮಸ್ಥರೊಂದಿಗ ಸಮಾಲೋಚನೆ ನಡೆಸಿದರು.

ಲಕ್ಕಲಕಟ್ಟಿ ತಾಂಡಾದಲ್ಲಿ 50ಕ್ಕೂ ಅಧಿಕ ಕುಟುಂಬಗಳಿದ್ದು, ತಾಂಡಾದಲ್ಲಿ ನಿರಂತರ ವಿದ್ಯುತ್ ಸಂಪರ್ಕಕ್ಕೆ ಗ್ರಾಮಸ್ಥರು ಮನವಿ ಮಾಡಿದರು.

ಸಂಬಂಧಿಸಿದ ಅಧಿಕಾರಿಗಳಿಗೆ ಇಒ ಅವರು, ಸ್ಥಳದಲ್ಲೇ ದೂರವಾಣಿ ಕರೆ ಮಾಡಿ ನಿರಂತರ ವಿದ್ಯುತ್ ಸಂಪರ್ಕ ಇಲ್ಲದೇ ತಾಂಡಾ ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದು, ನಿರಂತರ ವಿದ್ಯುತ್ ಸಂಪರ್ಕ ನೀಡಿ ಸಮಸ್ಯೆ, ಬಗೆಹರಿಸುವಂತೆ ಸೂಚಿಸಿದರು.

ತಾಂಡಾಕ್ಕೆ ಸಮರ್ಪಕ ಕುಡಿಯುವ ನೀರು ಹಾಗೂ ತಾಂಡಾದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿರಂತರವಾಗಿ ಕೈಗೊಂಡು ತಾಂಡಾದ ವಾತಾವರಣ ಸ್ವಚ್ಛಂದವಾಗಿಟ್ಟುಕೊಳ್ಳುವಂತೆ ಶ್ರಮಿಸಬೇಕೆಂದು ಇಒ ಚಂದ್ರಶೇಖರ ಕಂದಕೂರ ಸ್ಥಳದಲ್ಲಿದ್ದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಗ್ರಾಪಂ ಪಿಡಿಒ ಶಿವಯೋಗಿ ರಿತ್ತಿ, ಕಾರ್ಯದರ್ಶಿ ಶರಣಪ್ಪ ಮೇಟಿ, ತಾಂಡಾ ರೋಜಗಾರ ಮಿತ್ರ ಸಕ್ಕುಬಾಯಿ ರಾಥೋಡ, ಗ್ರಾಮ ಕಾಯಕ ಮಿತ್ರ ಸುಜಾತ ಮ್ಯಾಗೇರಿ ಹಾಗೂ ಗ್ರಾಪಂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande