
ವಿಜಯಪುರ, 30 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದ ಐತಿಹಾಸಿಕ ಆನಂದ ಮಹಲ್ ಆವರಣದಲ್ಲಿ ಪಾಕಿರ್ಂಗ ವ್ಯವಸ್ಥೆ, ಪುಡಕೋರ್ಟ, ಕರಕುಶಲ ಮಳಿಗೆ, ಲ್ಯಾಂಡ ಸ್ಕೇಪಿಂಗ, ಲೈಟಿಂಗ ವ್ಯವಸ್ಥೆ, ಕಂಪೌಂಡ್ ನಿರ್ಮಾಣ, ಸಿಸಿ ಟಿವಿ ಸೇರಿದಂತೆ ಪ್ರವಾಸಿ ಮೂಲಭೂತ ಸೌಲಭ್ಯ ಕಲ್ಪಿಸುವ ಕಾಮಗಾರಿಗಳನ್ನು ಕೈಗೊಳ್ಳಲು ಸೂಕ್ತ ಯೋಜನಾ ವರದಿ ತಯಾರಿಸಲು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
2025-26 ನೇ ಸಾಲಿನ ಆಯವ್ಯಯ ಘೋಷಣೆಯಲ್ಲಿ ರಾಜ್ಯದ ಆಯ್ದ 10 ಜಿಲ್ಲೆಗಳಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ವಿಜಯಪುರ ನಗರದ ಆನಂದ ಮಹಲ್ ಆವರಣವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ರೂ.5.00 ಕೋಟಿಗಳ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಘೋಷಿಸಿರುವ ಹಿನ್ನಲೆಯಲ್ಲಿ ಅ.30ರ ಗುರುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಸದರಿ ಕಟ್ಟಡದಲ್ಲಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಸರ್ಕಾರಿ ವಸ್ತು ಸಂಗ್ರಹಾಲಯ ನಿರ್ಮಿಸಲು ಅನುಮೋದನೆ ನೀಡಲಾಗಿರುವ ಕಾಮಗಾರಿಗಳ ಕುರಿತು ಚರ್ಚಿಸಿ, ಈಗಾಗಲೇ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ರೂ.5.00 ಕೋಟಿ ವೆಚ್ಚದಲ್ಲಿ ಪಾರಂಪರಿಕ ಆನಂದ ಮಹಲ್ ಕಟ್ಟಡವನ್ನು ಸಂರಕ್ಷಣೆ ಕಾಮಗಾರಿಯನ್ನು ಕೈಗೊಂಡು ಪೂರ್ಣಗೊಳಿಸಲಾಗಿದ್ದು, ಪಾಕಿರ್ಂಗ್, ಗಾರ್ಡನ ಅಭಿವೃದ್ಧಿ ಪೂಡಕೋರ್ಟ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಲ್ಯಾಂಡಸ್ಕೇಪಿಂಗ್, ರಸ್ತೆಬದಿ ಸೌಲಭ್ಯಗಳನ್ನು ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿ ಪಡಿಸಲು ಸೂಚಿಸಲಾಯಿತು.
ನಂತರ ಆನಂದ ಮಹಲ ಆವರಣ, ಗಗನ ಮಹಲ, ಮೆಕ್ಕಾ ಮಸೀದ ಹತ್ತಿರ ಇರುವ ಗಾರ್ಡನ ಪ್ರದೇಶ, ಕೋಟೆಗೋಡೆ ಆವರಣ, ಜಿಲ್ಲಾಧಿಕಾರಿಗಳ ಕಛೇರಿ ಆವರಣ, ಸಾತ್ ಮಂಜಿಲ್ ಹಾಗೂ ಇನ್ನಿತರೆ ಪ್ರದೇಶಗಳಿಗೆ ಭೇಟಿ ನೀಡಿ ಸಮಗ್ರ ಯೋಜನಾ ವರದಿಯನ್ನು ತಯಾರಿಸಲು ಸ್ಥಳ ಪರಿಶೀಲನೆ ನಡೆಸಲಾಯಿತು.
ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅರವಿಂದ ಹೂಗಾರ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಅನಿಲಕುಮಾರ.ರಾ.ಬಣಜಿಗೇರ ತಯಾರಿಸಿರುವ ಪ್ರಾತ್ಯಕ್ಷತೆಯನ್ನು ಪ್ರಸ್ತುತ ಪಡಿಸಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಲಾವರೆನ್ಸ್ ಸಿ.ಎ., ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಹೇರಿಟೇಜ್ ತಜ್ಞರಾದ ಪೀಟರ್ ಅಲೆಕ್ಸಾಂಡರ, ಅಮೀನ್ ಹುಲ್ಲೂರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande