ಬಿಜೆಪಿಯಿಂದ ಸರ್ದಾರ್ ವಲ್ಲಭಾಯಿ ಪಟೇಲ್ ಜಯಂತೋತ್ಸವ
ವಿಜಯಪುರ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ವತಿಯಿಂದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜಯಂತೋತ್ಸವ ಆಚರಿಸಲಾಯಿತು. ವಿಜಯಪುರ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪಾಂಜಲಿ ಸಲ್ಲಿಸುವ ಮೂಲಕ ನಮನ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗು
ಸರ್ದಾರ್


ವಿಜಯಪುರ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ ವತಿಯಿಂದ ಸರ್ದಾರ್ ವಲ್ಲಭಾಯಿ ಪಟೇಲ್ ಅವರ ಜಯಂತೋತ್ಸವ ಆಚರಿಸಲಾಯಿತು. ವಿಜಯಪುರ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪಾಂಜಲಿ ಸಲ್ಲಿಸುವ ಮೂಲಕ ನಮನ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಸರ್ದಾರ ವಲ್ಲಭಾಯಿ ಪಟೇಲ್ ಉಕ್ಕಿನ ಮನುಷ್ಯರೆಂದೆ ಖ್ಯಾತಿ, ದೇಶದ ಸ್ವಾತಂತ್ರಕ್ಕಾಗಿ ಮಹೋನ್ನತ ಕೊಡುಗೆ ನೀಡಿದ ಮಹಾನ್ ಚೇತನ, ಹೈದರಾಬಾದ್ ವಿಮೋಚನೆಗಾಗಿ ದಿಟ್ಟವಾದ ಸೈನ್ಯ ಕಾರ್ಯಾಚರಣೆ ನಡೆಸಿ ಅದನ್ನು ದೇಶದ ಭಾಗವಾಗಿಸಿದರು, ಅನೇಕ ಪ್ರಾಂತ್ಯಗಳು ಭಾರತದ ಒಕ್ಕೂಟ ಸೇರುವ ನಿಟ್ಟಿನಲ್ಲಿ ಅವರು ವಹಿಸಿದ ಕಾರ್ಯ ಅನನ್ಯ, ಅವರೊಬ್ಬರ ಧೀಮಂತ ಜನನಾಯಕ, ಈ ಕಾರಣಕ್ಕಾಗಿಯೇ ಅವರ ಬೃಹತ್ ಪ್ರತಿಮೆಯನ್ನು ಬಿಜೆಪಿ ಸರ್ಕಾರ ಅವಧಿಯಲ್ಲಿ ಸ್ಥಾಪಿಸಲಾಗಿದೆ, ಅವರ ಆದರ್ಶಗಳು ನಮಗೆ ಮಾರ್ಗದರ್ಶಿ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣಾ ರಾವೂರ, ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ, ಡಾ.ಸುರೇಶ್ ಬಿರಾದಾರ, ಶಿವರುದ್ರ ಬಾಗಲಕೋಟ, ಶಂಕರಗೌಡ ಪಾಟೀಲ, ಶ್ರೀಧರ್ ಬಿಜ್ಜರಗಿ ಬಸವರಾಜ ಬೈಚಬಾಳ, ಕೃಷ್ಣಾ ಗುನ್ನಾಳಕರ, ರಮೇಶ್ ಬಿದನೂರು, ಸಂದೀಪ್ ಪಾಟೀಲ, ಪಾಪುಸಿಂಗ ರಜಪೂತ, ಚಿನ್ನು ಚಿನ್ನಗೊಂಡ, ಡಾ.ಮಲ್ಲನಗೌಡ ಬಿರಾದಾರ, ಮಲ್ಲಿಕಾರ್ಜುನ ಕಲಾದಗಿ ಮೊದಲಾದವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande