
ವಿಜಯಪುರ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಿಜೆಪಿಗರು ಹುಟ್ಟು ಸುಳ್ಳುಗಾರರು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ವಿಜಯಪುರ ನಗರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಪ್ರವಾಹ ಪರಿಹಾರ ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿ, ದೇಶದಲ್ಲಿ ಸುಳ್ಳು ಸೃಷ್ಟಿ ಮಾಡುವ ಫ್ಯಾಕ್ಟರಿ ಇಟ್ಟುಕೊಂಡಿದೆ. ಇದಕ್ಕೆ ಪ್ರಿನ್ಸ್ಪಾಲ್ ಪ್ರಧಾನಿ ನರೇಂದ್ರ ಮೋದಿ ಎಂದು ಕಿಡಿಕಾರಿದರು. ಸುಳ್ಳು ಹೇಳುವುದರಲ್ಲಿ ಬಿಜೆಪಿ ನಂಬರ ಒನ್. ವಯನಾಡ್ನಲ್ಲಿ ಸಂಸದ ಪ್ರಿಯಾಂಕ ಗಾಂಧಿ ಇರುವುದರಿಂದ ಬಿಜೆಪಿಗೆ ಹೊಟ್ಟೆ ಉರಿ ಇದೆ. ಬಿಜೆಪಿ ಎಂದರೆ ಬುರುಡೆ ಜನರ ಪಕ್ಷ ಎಂದು ಸಚಿವ ರಾಮಲಿಂಗಾರೆಡ್ಡಿ ಲೇವಡಿ ಮಾಡಿದರು.
ಸಾರಿಗೆ ಇಲಾಖೆಯಿಂದ ರೈಲ್ವೆದಿಂದ ಕಡಿಮೆದಲ್ಲಿ ದರದಲ್ಲಿ ಜನತೆಗೆ ಪ್ರವಾಸ ಕೈಗೊಳ್ಳಲಾಗಿದೆ. ಆದರೆ, ಇದು ಬಿಜೆಪಿಗೆ ಕಾಣುವುದಿಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande