ರಾಯಚೂರು, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯ ಅಕ್ಟೋಬರ್ 14ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು, ಪ್ರವರ್ಗ-1, 2ಎ, 3ಎ, ಮತ್ತು 3ಬಿ, ಪ.ಜಾ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಮತ್ತು ವಿದ್ಯಾರ್ಥಿಯ ಪೆÇೀಷಕರ ವಾರ್ಷಿಕ ಆದಾಯದ ಮಿತಿ, ಪ್ರವರ್ಗ-1, ಎಸ್.ಸಿ & ಎಸ್.ಟಿ 2.50 ಲಕ್ಷ ರೂ. ಪ್ರವರ್ಗ- 2ಎ, 2ಬಿ, 3ಎ, 3ಬಿ, ರೂ. 1.00 ಲಕ್ಷ ಹೊಂದಿದ ವಿದ್ಯಾರ್ಥಿಗಳು https://shp.karnataka.gov.in/bcwd ಗೆ ಭೇಟಿ ನೀಡಿ ಅಕ್ಟೋಬರ್ 14ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇಲಾಖೆಯ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದಾಗಿದ್ದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕ ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:8050770004, 8050770005ಗೆ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್