ಸಮೀಕ್ಷೆ ಆಧರಿಸಿ ಸೌಲಭ್ಯಗಳ ಹಂಚಿಕೆಗೆ ಪ್ರಯತ್ನ : ಎನ್ಎಸ್ ಬೋಸರಾಜು
ರಾಯಚೂರು, 04 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಸ್ವಯಂಪ್ರೇರಿತವಾಗಿ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ಎಂದು ಸಣ್ಣ ನೀರಾವರಿ ಹಾಗೂ ವಿಜ
ಸಮೀಕ್ಷೆ ಆಧರಿಸಿ ಸೌಲಭ್ಯಗಳ ಹಂಚಿಕೆಗೆ ಪ್ರಯತ್ನ- ಎನ್ಎಸ್ ಬೋಸರಾಜು


ಸಮೀಕ್ಷೆ ಆಧರಿಸಿ ಸೌಲಭ್ಯಗಳ ಹಂಚಿಕೆಗೆ ಪ್ರಯತ್ನ- ಎನ್ಎಸ್ ಬೋಸರಾಜು


ರಾಯಚೂರು, 04 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯ ಮೂಲಕ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಉದ್ದೇಶವನ್ನು ಈಡೇರಿಸಲು, ಸ್ವಯಂಪ್ರೇರಿತವಾಗಿ ಎಲ್ಲರೂ ಸಮೀಕ್ಷೆಯಲ್ಲಿ ಭಾಗವಹಿಸಿ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದರು‌

ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವರ ನಿವಾಸದಲ್ಲಿ ಸಮೀಕ್ಷೆಗೆ ಬಂದ ಅಧಿಕಾರಿಗಳಿಗೆ ಸ್ವವಿವರ ಸಲ್ಲಿಸಿದ ಅವರು ಸಮೀಕ್ಷೆಯಲ್ಲಿ ಭಾಗವಹಿಸಿದರು.

ಈ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಸಂಗ್ರಹಿಸುವುದು ಬಹಳ ಮುಖ್ಯ. ಸಮೀಕ್ಷೆಯಿಂದ ಜನರ ವಾಸ್ತವ ಪರಸ್ಥಿತಿ ತಿಳಿಯಲಿದೆ. ವಾಸ್ತ ಪರಸ್ಥಿತಿಗೆ ಅನುಗುಣವಾಗಿ ಸಮೀಕ್ಷೆಯ ವರದಿಯಾದರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಮಾಹಿತಿ ನೀಡಿದರು

ಈಗಾಗಲೆ ಸಮೀಕ್ಷೆ ಕಾರ್ಯ ರಾಜ್ಯದಾದ್ಯಂತ 50% ಮುಕ್ತಾಯವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸರ್ಕಾರ ನಿಗದಿಪಡಿಸಿದ ಸಮಯದೊಳಗೆ ಸಮೀಕ್ಷೆ ಮುಗಿಸಬೇಕಾಗಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande