ಅ.15ರಂದು ಜಿಲ್ಲಾ ಮಟ್ಟದ ಯುವಜನೋತ್ಸವ
ವಿಜಯಪುರ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆರ್ಯುವೇದ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ
ಅ.15ರಂದು ಜಿಲ್ಲಾ ಮಟ್ಟದ ಯುವಜನೋತ್ಸವ


ವಿಜಯಪುರ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್ ಆರ್ಯುವೇದ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವ್ಹಿ.ಎಸ್. ಆರ್ಯುವೇದ ಮಹಾವಿದ್ಯಾಲಯದ ವಾಗ್ಭಟ ಸಂಭಾಂಗಣದಲ್ಲಿ ಅಕ್ಟೋಬರ್ 15ರ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.

15 ರಿಂದ 29 ವರ್ಷದೊಳಗಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಜನಪದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಲು ಒಂದು ತಂಡದಲ್ಲಿ 10 ಸ್ಪರ್ಧಿಗಳನ್ನು ಹಾಗೂ 15 ನಿಮಿಷ ಅವಧಿ ನಿಗದಿಪಡಿಸಲಾಗಿದ್ದು, ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯನ್ನು ಆಯ್ದುಕೊಳ್ಳಬಹುದಾಗಿದೆ.

ಜನಪದ ಗೀತೆಯಲ್ಲಿ ಭಾಗವಹಿಸಲು ಒಂದು ತಂಡದಲ್ಲಿ 10 ಸ್ಪರ್ಧಿಗಳನ್ನು ಹಾಗೂ 07 ನಿಮಿಷದ ಅವಧಿ ನಿಗದಿ ಪಡಿಸಲಾಗಿದ್ದು, ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಯನ್ನು ಆಯ್ದುಕೊಳ್ಳಬಹುದಾಗಿದೆ.

ಕಥೆ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವವರು 60 ನಿಮಿಷಗಳಲ್ಲಿ 1000 ಪದಗಳಿಗೆ ಮೀರದಂತೆ ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಗಳಲ್ಲಿ ಕಥೆ ಬರೆಯಬಹುದಾಗಿದೆ.

ಚಿತ್ರಕಲೆ ಸ್ಪರ್ಧೆಯಲ್ಲಿ ಭಾಗವಹಿಸುವರಿಗೆ 90 ನಿಮಿಷಗಳ ಕಾಲಮಿತಿ ನಿಗದಿ ಪಡಿಸಲಾಗಿದ್ದು, ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಗಳಲ್ಲಿ ಒಬ್ಬರು ಭಾಗವಹಿಸಬಹುದು.

ಕವಿತೆ ಬರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವವರು 90 ನಿಮಿಷಗಳ ಕಾಲ ಮಿತಿಯಲ್ಲಿ ಕನ್ನಡ, ಆಂಗ್ಲ ಅಥವಾ ಹಿಂದಿ ಭಾಷೆಗಳಲ್ಲಿ ಕವಿತೆ ಬರೆಯಬಹುದಾಗಿದ್ದು, ಒಬ್ಬರು ಭಾಗವಹಿಸಬಹುದು.

ಸಾಯಿನ್ಸ್ ಮೇಳದ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ 5 ಜನ ಒಳಗೊಂಡಿರಬೇಕು.

ಆಸಕ್ತ ವಿದ್ಯಾರ್ಥಿಗಳು ಹಾಗೂ ಯುವಜನ ಸಂಘಗಳ ಸದಸ್ಯರು ನಗರದ ಡಾ.ಬಿ.ಆರ್.ಅಂಬೇಡ್ಕರ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅಕ್ಟೋಬರ್ 13ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 08352-251085, 701900843 ಹಾಗೂ 9535501872 ಸಂಪರ್ಕಿಸಬಹುದಾಗಿದೆ ಎಂದು ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande