ರಾಯಚೂರು, 05 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ ಮೂಲಕ ಅಂತರ್ಜಲ ವೃದ್ಧಿಗಾಗಿ ವೈಜ್ಞಾನಿಕ ಯೋಜನೆಗಳನ್ನು ರೂಪಿಸಿದ್ದೇವೆ. ಈ ಭಾಗದ ಕೆರೆಗಳನ್ನು ಅಭಿವೃದ್ಧಿಗೊಳಿಸಲು ನಮ್ಮ ಇಲಾಖೆಯಿಂದ ಪ್ರಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ. ಕೆರೆಗಳ ಅಭಿವೃದ್ಧಿ ಕಾಮಗಾರಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಸಚಿವರಾದ ಎನ್ಎಸ್ ಬೋಸರಾಜು ಅವರು ತಿಳಿಸಿದರು.
ರಾಯಚೂರು ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗದ್ವಾಲ್ ರಸ್ತೆಯಲ್ಲಿರುವ ತಾಯಮ್ಮ ಕೆರೆಯನ್ನು 1.50 ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ನೆರವೇರಿಸಿದರು.
ಕುಡಿಯುವ ನೀರಿಗಾಗಿ, ಕೃಷಿ ಚಟುವಟಿಕೆಗಳಿಗಾಗಿ ರೈತರು ಸೇರಿದಂತೆ
ಕೆರೆ-ಕಟ್ಟೆಗಳ ನೀರಿನ ಮೇಲೆ ಅವಲಂಬನೆಯಾಗಿದ್ದಾರೆ ಅಲ್ಲದೆ ಅನೇಕ ಜಲಚರ ಪ್ರಾಣಿ-ಪಕ್ಷಿಗಳು ಅವಲಂಬನೆಯಾಗಿರುವುದರಿಂದ
ಅಂತರ್ಜಲ ಸಮೃದ್ಧಿಗಾಗಿ ಎಲ್ಲಾ ಕೆರೆಗಳ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ. ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಿಸಬೇಕು. ಕೆರೆ ಒತ್ತುವರಿಯನ್ನು ಮಾಡದಂತೆ ಕೆರೆ ವ್ಯಾಪ್ತಿಯ ಭೂಮಿಯನ್ನು ಸಂರಕ್ಷಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎ ಪಾಪರಡ್ಡಿ, ಕಾಂಗ್ರೆಸ್ ಮುಖಂಡರಾದ ಮೊಹ್ಮದ್ ಶಾಲಂ, ಹಿರಿಯರಾದ ಕೆ ಶಾಂತಪ್ಪ, ಜಯಣ್ಣ, ಜಯವಂತ ರಾವ್ ಪತಂಗೆ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ರಾಜು ಪಟ್ಟಿ, ಸುಭಾಷ್, ಮಾಡಗಿರಿ ನರಸಿಂಹಲು, ಎಇಇ ಲೋಕೇಶ್ ಸೇರಿ ನೀರಾವರಿ ಇಲಾಖೆಯ ಅಧಿಕಾರಿಗಳು ಪಕ್ಷದ ಕಾರ್ಯಕರ್ತರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್