ಬೆಂಗಳೂರು, 05 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಕಸ್ಮಿಕವಾಗಿ ಬೆಂಕಿ ತಗುಲಿ ಗುಜರಿ ಗೋದಾಮು ಹೊತ್ತಿ ಉರಿದ ಘಟನೆ ಬೆಂಗಳೂರು ಬಳಿಯ ಬೇಗೂರಿನ ನಡೆದಿದೆ.
ಪೇಪರ್ ಮತ್ತು ಕಾಟನ್ ಬಾಕ್ಸ್ಗಳಿಗೆ ಬೆಂಕಿ ಹೊತ್ತಿದ ಪರಿಣಾಮ ಇಡೀ ಗೋದಾಮು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳದಲ್ಲಿ 4 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗಿದೆ.
ಅದೃಷ್ಟವಶಾತ್ ಬೆಂಕಿ ಅವಗಡದಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಲಕ್ಷಾಂತರ ರೂ. ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa