ಉತ್ತರಾಖಂಡದಲ್ಲಿ ನಿರಂತರ ಮಳೆ, ಹಿಮಪಾತ
ಡೆಹ್ರಾಡೂನ್, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡದಲ್ಲಿ ಮಳೆ ಮುಂದುವರೆದಿದ್ದು, ಬದರಿನಾಥ್, ಕೇದಾರನಾಥ್, ಗಂಗೋತ್ರಿ, ಯಮುನೋತ್ರಿ ಮತ್ತು ಹೇಮಕುಂಡ್ ಸಾಹಿಬ್ ಪ್ರದೇಶಗಳಲ್ಲಿ ಹಿಮಪಾತದಿಂದ ಪರ್ವತ ಪ್ರದೇಶಗಳಲ್ಲಿ ತೀವ್ರ ಚಳಿ ತಟ್ಟಿದೆ. ರಾಜ್ಯದಲ್ಲಿ ಸೋಮವಾರ ಬೆಳಿಗ್ಗೆಯಿಂದ ನಿರಂತರ ಮಳೆ
Snowfall


ಡೆಹ್ರಾಡೂನ್, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಉತ್ತರಾಖಂಡದಲ್ಲಿ ಮಳೆ ಮುಂದುವರೆದಿದ್ದು, ಬದರಿನಾಥ್, ಕೇದಾರನಾಥ್, ಗಂಗೋತ್ರಿ, ಯಮುನೋತ್ರಿ ಮತ್ತು ಹೇಮಕುಂಡ್ ಸಾಹಿಬ್ ಪ್ರದೇಶಗಳಲ್ಲಿ ಹಿಮಪಾತದಿಂದ ಪರ್ವತ ಪ್ರದೇಶಗಳಲ್ಲಿ ತೀವ್ರ ಚಳಿ ತಟ್ಟಿದೆ.

ರಾಜ್ಯದಲ್ಲಿ ಸೋಮವಾರ ಬೆಳಿಗ್ಗೆಯಿಂದ ನಿರಂತರ ಮಳೆಯಾಗುತ್ತಿದ್ದು, ಗಂಗೋತ್ರಿ–ಯಮುನೋತ್ರಿ ದೇವಾಲಯಗಳ ಸುತ್ತಲಿನ ಶಿಖರಗಳು ಹಿಮದಿಂದ ಆವೃತವಾಗಿವೆ. ಹಿಮಪಾತದ ಪರಿಣಾಮ ಹೆಲಿಕಾಪ್ಟರ್ ಸೇವೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಆದರೆ ಯಾತ್ರಿಕರ ಅನುಕೂಲಕ್ಕಾಗಿ ದೇವಾಲಯಗಳಲ್ಲಿ ದೀಪೋತ್ಸವ ಹಾಗೂ ತುರ್ತು ವೈದ್ಯಕೀಯ ಸೇವೆಗಳ ವ್ಯವಸ್ಥೆ ಮಾಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಮಧ್ಯಮ ಮಳೆ ಮತ್ತು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪಿಥೋರಗಢ, ಬಾಗೇಶ್ವರ, ರುದ್ರಪ್ರಯಾಗ, ಉತ್ತರಕಾಶಿ ಹಾಗೂ ಚಮೋಲಿ ಜಿಲ್ಲೆಗಳ 3500 ಮೀಟರ್‌ಗಿಂತ ಮೇಲಿನ ಪ್ರದೇಶಗಳಲ್ಲಿ ಭಾರೀ ಹಿಮಪಾತದ ಎಚ್ಚರಿಕೆ ನೀಡಲಾಗಿದೆ.

ಮಳೆ ಮತ್ತು ಹಿಮಪಾತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಪ್ರವಾಸಿಗರು ಹಾಗೂ ಯಾತ್ರಿಕರಿಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande