ಜೀವನದ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ : ಹೆಚ್.ಆರ್.ಗವಿಯಪ್ಪ
ಹೊಸಪೇಟೆ, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮಹಾಕಾವ್ಯ ರಾಮಾಯಣದ ಮೂಲಕ ಜೀವನದ ಮೌಲ್ಯಗಳನ್ನು ಜಗತ್ತಿಗೆ ಸಾರಿದವರು ಮಹಾಕವಿ ಶ್ರೀಮಹರ್ಷಿ ವಾಲ್ಮೀಕಿ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲ
ರಾಮಾಯಣದ ಮೂಲಕ ಜೀವನದ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ : ಹೆಚ್.ಆರ್.ಗವಿಯಪ್ಪ ಹೇಳಿಕೆ.


ರಾಮಾಯಣದ ಮೂಲಕ ಜೀವನದ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ : ಹೆಚ್.ಆರ್.ಗವಿಯಪ್ಪ ಹೇಳಿಕೆ.


ರಾಮಾಯಣದ ಮೂಲಕ ಜೀವನದ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ : ಹೆಚ್.ಆರ್.ಗವಿಯಪ್ಪ ಹೇಳಿಕೆ.


ಹೊಸಪೇಟೆ, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮಹಾಕಾವ್ಯ ರಾಮಾಯಣದ ಮೂಲಕ ಜೀವನದ ಮೌಲ್ಯಗಳನ್ನು ಜಗತ್ತಿಗೆ ಸಾರಿದವರು ಮಹಾಕವಿ ಶ್ರೀಮಹರ್ಷಿ ವಾಲ್ಮೀಕಿ ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸದಲ್ಲಿ ಕಾರ್ಯಕ್ರಮದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಸಲ್ಲಿಸಿ ಅವರು ಮಂಗಳವಾರ ಮಾತನಾಡಿದರು.

ವಾಲ್ಮೀಕಿ ಸಮುದಾಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗವನ್ನು ಸಮುದಾಯದವರು ಸದ್ಭಳಕೆ ಪಡಿಸಿಕೊಳ್ಳಬೇಕು. ನಾನು ಸಹ ಮುಖ್ಯಮಂತ್ರಿಗಳಿಗೆ ಮುಂದಿನ ದಿನದಲ್ಲಿ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುವಂತೆ ಮನವಿ ಮಾಡಿಕೊಳ್ಳುತ್ತೇನೆ.

ಮಹರ್ಷಿ ವಾಲ್ಮೀಕಿಗಳು ಮಹಾಕಾವ್ಯ ರಾಮಾಯಣವನ್ನು ರಚಿಸುವ ಮೂಲಕ ಮಾನವ ಧರ್ಮಕ್ಕೆ ಕೊಡುಗೆ ನೀಡುವ ಮ‌ೂಲಕ ಪೂಜ್ಯನೀಯರಾಗಿದ್ದಾರೆ. ಸಂಸ್ಕೃತದಲ್ಲಿ ಮೊಟ್ಟ ಮೊದಲಿಗೆ ರಾಮಾಯಣವನ್ನು ರಚಿಸಲಾಯಿತು. ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಆದಿಕವಿ ಮಹರ್ಷಿ ವಾಲ್ಮೀಕಿಯವರನ್ನು ನಾವೆಲ್ಲರೂ ಸದಾಕಾಲವೂ ಸ್ಮರಿಸಿಕೊಳ್ಳಬೇಕು‌ ಎಂದರು.

ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಾಧ್ಯಾಪಕರು ಮತ್ತು ಸದಸ್ಯರಾದ ಡಾ.ಸಿ.ಬಿ.ಚಿಲ್ಕರಾಗಿ ರವರು ಉಪನ್ಯಾಸ ನೀಡಿ, ರಾಮಾಯಣ ಕಾವ್ಯದ ಮೂಲಕ ಅವರು ನೀಡಿರುವ ಆದರ್ಶ ಮೌಲ್ಯಗಳನ್ನು ಯುವಪೀಳಿಗೆಯು ತಿಳಿಯಬೇಕಿದೆ. ಮಹರ್ಷಿ ವಾಲ್ಮೀಕಿಯವರು ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ಮಾನವೀಯತೆ, ಸಮಾನತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ ಮತ್ತು ರಾಜನೀತಿ ಮುಂತಾದ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ. ರಾಮಾಯಣ ಮಹಾಕಾವ್ಯವು ಭಾರತದ ಚಿತ್ರಕಲೆ, ವಾಸ್ತುಶಿಲ್ಪ, ಸಂಸ್ಕೃತಿ, ಇತಿಹಾಸ, ಪರಂಪರೆ, ಸಂಗೀತ, ನೃತ್ಯಕಲೆ, ರಂಗಭೂಮಿ, ನಾಟಕ, ಯಕ್ಷಗಾನ, ಚಲನಚಿತ್ರ, ಮುಂತಾದ ಕ್ಷೇತ್ರಗಳ ಮೇಲೆ ಅಗಾಧವಾದ ಪ್ರಭಾವವನ್ನು ಬೀರಿದೆ. ವಿಶ್ವ ಸಾಹಿತ್ಯ ಮಟ್ಟದ ಮಹಾಕಾವ್ಯವಾಗಿ ಜನಪ್ರಿಯತೆಯನ್ನು ಪಡೆದಿದೆ. ವಾಲ್ಮೀಕಿಯವರು ವಿಶ್ವಕವಿಯಾಗಿ, ಇತಿಹಾಸಕಾರರಾಗಿ, ಶಾಸ್ತ್ರಜ್ಞರಾಗಿ, ತತ್ವಜ್ಞಾನಿಯಾಗಿ ಗೌರವಿಸಲ್ಪಡುತ್ತಾರೆ.

ಅವರ ಜೀವನಗಾಥೆ ದಲಿತ ಪ್ರತಿಭೆಗೆ ಪ್ರೇರಣೆಯಾಗಿದೆ ಮತ್ತು ಸತ್ಯ ಹಾಗೂ ಧರ್ಮದ ಹಾದಿಯಲ್ಲಿ ನಡೆಯಲು ಉದಾಹರಣೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವೈಭವ, ನವೀನ.ಎಂ.ಬಿ. ರವರಿಗೆ ಜಡಗ ಮತ್ತು ಬಾಲ ಯೋಜನೆಯಡಿ 1 ಲಕ್ಷ ರೂ. ಗಳ ಪ್ರೋತ್ಸಾಹಧನ ನೀಡಲಾಯಿತು.

ದೇವದಾಸಿ ಮಕ್ಕಳ ವಿವಾಹವಾದ ದಂಪತಿಗಳು ಹೊಸಪೇಟೆ ತಾಲೂಕಿನ ಪಿ‌.ಅಶ್ವಿನಿ ಗಂಡ ಎನ್.ರಮೇಶ್, ಕೂಡ್ಲಿಗಿ ತಾಲೂಕಿನ ಡಿ.ಹುಲಿಗೆಮ್ಮ ಗಂಡ ಎನ್.ಅಜ್ಜಯ್ಯ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಹೆಚ್.ಯಮುನಕ್ಕ ಗಂಡ ಶಿವರಾಜ ಇವರಿಗೆ ತಲಾ 5 ಲಕ್ಷ ರೂ.ಗಳು ದೇವದಾಸಿ ಮಕ್ಕಳ ವಿವಾಹ ಪ್ರೋತ್ಸಾಹ ಧನ ಬಾಂಡ್ ನ್ನು ವಿತರಿಸಲಾಯಿತು.

ಜಿಲ್ಲಾ ಮಟ್ಟದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

ಈ ವೇಳೆ ಜಿಲ್ಲಾಧಿಕಾರಿ ಕವಿತಾ.ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಅರಣ್ಯ ಇಲಾಖೆಯ ಜಿಲ್ಲಾ ಅಧಿಕಾರಿ ಅನುಪಮ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಮಂಜುನಾಥ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರವಿಕುಮಾರ.ಜೆ, ಹೊಸಪೇಟೆ ಸಹಾಯಕ ಆಯುಕ್ತರ ಪಿ.ವಿವೇಕಾನಂದ, ಜಿಲ್ಲಾ ಆರ್ ಸಿಎಚ್ ಅಧಿಕಾರಿ ಡಾ.ಜಂಬಯ್ಯ, ತಹಶೀಲ್ದಾರ ಶೃತಿ, ಹೊಸಪೇಟೆ ಬಿಇಓ ಶೇಖರಪ್ಪ ಹೊರಪೇಟೆ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಸಿಂಧು ಅಂಗಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande