ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ , 8 ಅಕ್ಟೋಬರ್ (ಹಿ.ಸ.) ಆ್ಯಂಕರ್: ಕೊಪ್ಪಳ ಜಿಲ್ಲೆಯ ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ 9 ಹಾಗೂ 11ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ. 2025-26ನೇ ಸಾಲಿನಲ್ಲಿ 8 ಹಾಗೂ
ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕೊಪ್ಪಳ , 8 ಅಕ್ಟೋಬರ್ (ಹಿ.ಸ.)

ಆ್ಯಂಕರ್: ಕೊಪ್ಪಳ ಜಿಲ್ಲೆಯ ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ 9 ಹಾಗೂ 11ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ.

2025-26ನೇ ಸಾಲಿನಲ್ಲಿ 8 ಹಾಗೂ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು 9ನೇ ತರಗತಿಗಾಗಿ https://cbseitms.nic.in/2024/nvsix ನಲ್ಲಿ ಹಾಗೂ 11ನೇ ತರಗತಿಗಾಗಿ https://cbseitms.nic.in/2024/nvsxi-11 ಮುಖಾಂತರ ಅ.21 ರೊಳಗೆ ಸಲ್ಲಿಸಬೇಕು. 2026 ರ ಫೆಬ್ರವರಿ 7 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಕುಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande