ಹುಬ್ಬಳ್ಳಿಯಲ್ಲಿ ಗುತ್ತಿಗೆದಾರನ ಅಪಹರಣ ಪ್ರಕರಣ ; ೧೦ ಮಂದಿ‌ ಪೋಲಿಸ್ ವಶಕ್ಕೆ
ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗುತ್ತಿಗೆದಾರ ಮೋಹನ್ ಚವ್ಹಾಣ್​ ಎಂಬವರ ಅಪಹರಣ ಪ್ರಕರಣದಲ್ಲಿ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮ
Arrest


ಹುಬ್ಬಳ್ಳಿ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಗುತ್ತಿಗೆದಾರ ಮೋಹನ್ ಚವ್ಹಾಣ್​ ಎಂಬವರ ಅಪಹರಣ ಪ್ರಕರಣದಲ್ಲಿ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬುಧವಾರ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಮೋಹನ್ ಚವ್ಹಾಣ್​ ಎಂಬವರನ್ನು ಬಸಪ್ಪ ದಳವಾಯಿ ಸೇರಿದಂತೆ 15ಕ್ಕೂ ಅಧಿಕ ಜನರ ತಂಡ ಮಾರಕಾಸ್ತ್ರಗಳಿಂದ ಬೆದರಿಸಿ , ಹಲ್ಲೆ ಮಾಡಿ ಕಾರಿನಲ್ಲಿ ಅಪಹರಿಸಿದ್ದರು. ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ಅಪಹರಣಕ್ಕೆ ಒಳಗಾದ ಮೋಹನ್ ಸಹೋದರ ಅರವಿಂದ್ ಚವ್ಹಾಣ್​ ದೂರು ನೀಡಿದ್ದರು ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಧಾರವಾಡದ ಕೆ.ಸಿ.ಪಾರ್ಕ್ ಬಳಿ ಪ್ರಮುಖ ಆರೋಪಿ ಬಸಪ್ಪ ದಳವಾಯಿ ಸೇರಿದಂತೆ ಹತ್ತು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದರು.

ಅಪಹರಣಕ್ಕೆ ಒಳಗಾಗಿದ್ದ ಗುತ್ತಿಗೆದಾರ ಮೋಹನ್ ಚವ್ಹಾಣ್​ನನ್ನು ಬೆಳಗಾವಿ ಜಿಲ್ಲೆ ಬೈಲಹೊಂಗಲ ಬಳಿ ರಕ್ಷಿಸಲಾಗಿದ್ದು, ಪ್ರಕರಣ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande