ರಾಯಚೂರು, 09 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಿದ್ದಪಡಿಸಲಾಗುತ್ತಿರುವ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕಿರುತ್ತದೆ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಆಗಿರುವ ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ತಿಳಿಸಿದ್ದಾರೆ.
ಅರ್ಜಿ ನಮೂನೆ 19ರಲ್ಲಿ ಅರ್ಜಿ ಸ್ವೀಕರಿಸಲು 2025ರ ನವಂಬರ್ 06 ಕೊನೆಯ ದಿನಾಂಕ ಆಗಿರುತ್ತದೆ. 2025ರ ನವಂಬರ್ 25ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳಿಗೆ 2025ರ ನವಂಬರ್ 25ರಿಂದ 2025ರ ಡಿಸೆಂಬರ್ 10ರವರೆಗೆ ಕಾಲಾವಕಾಶ ನೀಡಲಾಗಿದೆ. 2025ರ ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಭಾರತದ ಪ್ರಜೇಯಾಗಿರುವ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ ದಿನಾಂಕ:01-11-2025 ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢ ಶಾಲೆಗಿಂತ ಕಡಿಮೆ ಇಲ್ಲದ ನಿರ್ಧಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಟ 03 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ. ಹಾಗೆ ನಿರ್ಧಷ್ಟಪಡಿಸಿದ ಶೈಕ್ಷಣಿಕ ಸಂಸ್ಥೆಗಳ ಪಟ್ಟಿಯು ಮೊದಲನೇ ಅನುಸೂಚಿಯಲ್ಲಿ ತಿಳಿಸಲಾದ ಅಧಿಕಾರಿಗಳ ಬಳಿ ಇರುತ್ತದೆ.
ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾರೆಯಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ನೋಂದಣಾಧಿಕಾರಿಯು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸತಕ್ಕದ್ದಲ್ಲ. ಆದರೆ ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯವರ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಮತದಾರರ ನೋಂದಣಾಧಿಕಾರಿಗಳಿಗೆ ಕಳುಹಿಸಬಹುದು. ಒಂದೇ ಕುಟಂಬದ ಎಲ್ಲಾ ಸದಸ್ಯರು ನಮೂನೆ 19 ರಲ್ಲಿ ಅರ್ಜಿಗಳನ್ನು ಕುಟುಂಬ ಯಾವುದಾದರೂ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಧಿಸಿದಂತೆ ಸಂಸ್ಥೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಿ. ಪ್ರಮಾಣ ಪತ್ರವನ್ನು ಪರಿಶೀಲಿಸಿಕೊಳ್ಳಬೇಕು. ಅರ್ಜಿಯಲ್ಲಿನ ತಪ್ಪು ಅಥವಾ ತಪ್ಪೆಂದು ಅವನು ತಿಳಿದಿರುವ ಅಥವಾ ನಂಬುವಂತಹ ಅಥವಾ ಸತ್ಯವೆಂದು ನಂಬಲಾಗದಿರುವಂತಹ ಹೇಳಿಕೆಗಳನ್ನು ಅಥವಾ ಘೋಷಣೆಗಳನ್ನು ಮಾಡುವ ಯಾವುದೇ ವ್ಯಕ್ತಿಯನ್ನು ಪ್ರಜಾಪ್ರಾತಿನಿಧ್ಯ ಅಧಿನಿಯಮ 1950 ರ 31 ನೇ ಪ್ರಕರಣದ ಮೇರೆಗೆ ಶಿಕ್ಷೆಗೆ ಗುರಿಪಡಿಸಲಾಗುವುದು.
ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಯಸುವ ಪ್ರತಿಯೊಬ್ಬರು ಅರ್ಜಿ ನಮೂನೆ 19 ನ್ನು ಭರ್ತಿಮಾಡಿ ಅದರೊಂದಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿ 1 ನೇ ನವೋಂಬರ್ 2025 ಕ್ಕೆ ಮೊದಲು 6 ವರ್ಷಗಳ ಅವಧಿಯಲ್ಲಿ ಒಟ್ಟು ಕನಿಷ್ಟ 3 ವರ್ಷ ಭೋದನಾ ವೃತ್ತಿಯಲ್ಲಿ ನಿತವಾಗಿರುವ ಬಗ್ಗೆ ಶೈಕ್ಷಣಿಕ ಸಂಸ್ಥೆಗಳಿಂದ ಅನುಬಂಧ - 2 ರಲ್ಲಿ ಪ್ರಮಾಣ ಪತ್ರ ಸಲ್ಲಿಸತಕ್ಕದ್ದು.
ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು. ಗೊತ್ತುಪಡಿಸಿದ ಅಧಿಕಾರಿಗೆ ಸಲ್ಲಿಸಿದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತುಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುತ್ತಾರೆ. ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕøತಗೊಳ್ಳುತ್ತವೆ.
ಬಲ್ಕ (ಗುಚ್ಛಗಳಲ್ಲಿ) ಅರ್ಜಿಗಳನ್ನು ಸ್ವೀಕರಿಸುವುದಿಲ್ಲ. ಕರ್ನಾಟಕ ಈಶಾನ್ಯ ಶಿಕ್ಷಕರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೊಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಸೀಲ ಕಾರ್ಯಾಲಯದಲ್ಲಿ) ನಿಗದಿಪಡಿಸಿದ ಕಾಲಮಿತಿಯೊಳಗ ಸಲ್ಲಿಸತಕ್ಕದ್ದು. ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸುಭದ್ರ ಹಾಗೂ ಪ್ರಜಾಪ್ರಭುತ್ರ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಅರ್ಹ ಮತದಾರರಲ್ಲಿ ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್