ಶಾಲಾ ಕಾಲೇಜುಗಳಲ್ಲಿ ಯೋಗ ಕಾರ್ಯಕ್ರಮ
ಗದಗ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಲವರ್ದನೆಗಾಗಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯೋಗಾಭ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾ
ಪೋಟೋ


ಗದಗ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಲವರ್ದನೆಗಾಗಿ ಯೋಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಯೋಗಾಭ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ. ಆಡಳಿತಾಧಿಕಾರಿ ರಮಣದೀಪ್ ಚೌಧರಿ ತಿಳಿಸಿದರು.

ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಡೆಂಗ್ಯು ಹಾಗೂ ಚಿಕುನ್ ಗುನ್ಯಾ ರೋಗಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆಯ ಉಪನಿರ್ದೇಶಕರು ಮಾತನಾಡಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮು ಬಿತ್ತನೆ ಮುಂದಿನ ವಾರದಿಂದ ಪ್ರಾರಂಭವಾಗಲಿದೆ. ಹಿಂಗಾರು ಹಂಗಾಮಿಗೆ ಕಡಲೆ, ಹಿಂಗಾರಿ ಜೋಳ, ಗೋಧಿ ಸೂರ್ಯಕಾಂತಿ , ಹತ್ತಿ ಮುಖ್ಯ ಬೆಳೆಗಳಾಗಿವೆ. ರೈತರಿಗೆ ವಿತರಿಸಲು ಸದ್ಯ ರಸಗೊಬ್ಬರದ ಸಮಸ್ಯೆ ಇರುವುದಿಲ್ಲ . ರಾಜ್ಯ ವಲಯ ಕಾರ್ಯಕ್ರಮಗಳಡಿ ಪರಿಕರಗಳು ಮತ್ತು ಗುಣಮಟ್ಟ ನಿಯಂತ್ರಣ ಯೋಜನೆಯಡಿ ಏಪ್ರಿಲ್ 1 ರಿಂದ ಅಗಸ್ಟ 31 ರವರೆಗೆ 365 ಲಕ್ಷ ರೂ. ಗುರಿಯಿದ್ದು 360.29 ಲಕ್ಷ ರೂ ವೆಚ್ಚ ಮಾಡಲಾಗಿದ್ದು 99 % ರಷ್ಟು ಗುರಿ ಸಾಧಿಸಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ 110.00 ಲಕ್ಷ ರೂ. ಗುರಿಯಿದ್ದು 108.25 ಲಕ್ಷ ರೂ ವೆಚ್ಚ ಮಾಡಲಾಗಿದ್ದು 98 % ರಷ್ಟು ಗುರಿ ಸಾಧಿಸಲಾಗಿದೆ ಎಂದು ಸಭೆಗೆ ವಿವರಿಸಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಮಾತನಾಡಿ ತೋಟಗಾರಿಕೆ ಕ್ಷೇತ್ರಗಳ ನಿರ್ವಹಣೆ ಯೋಜನೆಯಡಿ ಅಗಸ್ಟ 31 ರ ಅಂತ್ಯದವರೆಗೆ 4.19 ಲಕ್ಷ ರೂ.ಗಳ ಗುರಿಯಿದ್ದು 4.07 ಲಕ್ಷ ರೂ. ವೆಚ್ಚ ಮಾಡಿ 97 % ರಷ್ಟು ಗುರಿ ಸಾಧಿಸಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ( ಹನಿ) ಯಡಿ 273 ಲಕ್ಷ ರೂ. ಗುರಿಯಿದ್ದು ಆ ಪೈಕಿ 262.45 ಲಕ್ಷ ರೂ. ವೆಚ್ಚ ಮಾಡಿ ಶೇ 96 ರಷ್ಟು ಗುರಿ ಸಾಧಿಸಲಾಗಿದೆ. ಬರುವ ಜನೆವರಿ ಅಥವಾ ಫೆಬ್ರುವರಿ ತಿಂಗಳಲ್ಲಿ ಇಲಾಖೆಯಿಂದ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಹನಿ ನೀರಾವರಿಯಲ್ಲಿ ಬಾಳೆ, ಪಪ್ಪಾಯಿ, ಡ್ರಾö್ಯಗನ್ ಫ್ರುಟ್ ಗಿಡಗಳನ್ನು ಬೆಳೆಯಲಾಗುವುದು ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಮಾತನಾಡಿ ಏಪ್ರಿಲ್ 1 ರಿಂದ ಅಗಸ್ಟ 31 ರವರೆಗೆ 53 ಡೆಂಗ್ಯು ಜ್ವರ ಪ್ರಕರಣಗಳು, 2 ಚಿಕುನ್ ಗುನ್ಯ ಪ್ರಕರಣಗಳು ಖಚಿತಪಟ್ಟಿವೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಾಲಾ ಶಿಕ್ಷಣ, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ಸಿ.ಎನ್.ಶ್ರೀಧರ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಚಳಗೇರಿ, ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande