
ಮಂಗಳೂರು, 01 ನವೆಂಬರ್ (ಹಿ.ಸ.) :
ಆ್ಯಂಕರ್ : ಮಂಗಳೂರಿನ ನೆಹರು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪುಷ್ಪಾರ್ಚನೆ ಸಲ್ಲಿಸಿ ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಇದೇ ವೇಳೆ ನಾನಾ ರಂಗಗಳಲ್ಲಿ ಸಾಧನೆಗೈದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದಿಸಿದರು.
ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಂಗಳೂರಿನ ನಾನಾ ಕಾಲೇಜಿನ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಮೇಳೈಸಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa