
ಬೆಂಗಳೂರು, 10 ನವೆಂಬರ್ (ಹಿ.ಸ.) :
ಆ್ಯಂಕರ : ಡಾ. ಹಿ.ಚಿ. ಬೋರಲಿಂಗಯ್ಯ ಅವರಿಗೆ 2025ರ ‘ಚಿದಾನಂದಮೂರ್ತಿ ಕನ್ನಡ ಸಂಸ್ಕೃತಿ ಪ್ರಶಸ್ತಿ’
ಬೆಂಗಳೂರು ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ತಿಮ್ಮೇಶ್ ಅವರಿಗೆ ‘ಕನ್ನಡ ಚಿರಂಜೀವಿ ಪ್ರಶಸ್ತಿ’
ಕೋಲಾರದ ಕನ್ನಡ ಹೋರಾಟಗಾರ ಅ.ಕೃ. ಸೋಮಶೇಖರ ಅವರಿಗೆ ‘ಕನ್ನಡ ಅರವಿಂದ ಪ್ರಶಸ್ತಿ’ ಗಳನ್ನು
ಕನ್ನಡ ಗೆಳೆಯರ ಬಳಗದ 2025ನೆಯ ಸಾಲಿನ ಈ ಪ್ರಶಸ್ತಿಗಳನ್ನು 09-12-2025ರಂದು ಕನ್ನಡ ಭವನದ ನಯನ
ಸಭಾಂಗಣದಲ್ಲಿ ನಡೆಯುವ ಕನ್ನಡ ಗೆಳೆಯರ ಬಳಗದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಗಳನ್ನು
ಕೊಡಮಾಡಲಾಗುವುದು. ಇದೇ ಸಮಾರಂಭದಲ್ಲಿ ಉತ್ತಮ ಕನ್ನಡ ಮಾಧ್ಯಮ ಶಾಲೆಗೆ ನಗದು ಬಹುಮಾನ, ಕನ್ನಡದಲ್ಲಿ
ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು. ಪ್ರೊ. ಮಲ್ಲೇಪುರಂ ವೆಂಕಟೇಶ್ ಅವರ ಅದ್ಯಕ್ಷತೆಯಲ್ಲಿ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಡಾ. ಎಲ್. ಹನುಮಂತಯ್ಯ ಕನ್ನಡ ಚಿಂತನೆ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ