ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಪಿ.ಸತ್ಯನಾರಾಯಣ ಆಯ್ಕೆ
ಹೊಸಪೇಟೆ, 10 ನವೆಂಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪಿ.ಸತ್ಯನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಲಕ್ಷಮಣ ರಾಜ್ಯ ಕಾರ್ಯಕ
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾಗಿ ಪಿ.ಸತ್ಯನಾರಾಯಣ ಆಯ್ಕೆ


ಹೊಸಪೇಟೆ, 10 ನವೆಂಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪಿ.ಸತ್ಯನಾರಾಯಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಲಕ್ಷಮಣ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪಿ.ವೆಂಕೋಬ ನಾಯಕ, ಜಿಲ್ಲಾ ಕಾರ್ಯದರ್ಶಿಯಾಗಿ ಕೆ.ಸುರೇಶ್ ಚವ್ಹಾಣ್, ಎಂ.ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಪಾಧ್ಯಕ್ಷರ ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಿ.ಕೆ.ನಾಗರಾಜ್, ಡಿ.ರುದ್ರಪ್ಪ, ಟಿ.ಬಿ.ರಾಜ ಇವರು ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ.

ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ 15 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿರುತ್ತದೆ. ಅವಿರೋಧ ಆಯ್ಕೆಯಾದವರಲ್ಲಿ ಸಿ.ಶಿವಾನಂದ, ಭೀಮರಾಜ.ಯು, ಆನಂತ ಪದ್ಮನಾಭ ರಾವ್, ಬಿ.ಕುಮಾರಸ್ವಾಮಿ, ಸಂಜಯ ಕುಮಾರ, ಎಂ.ಬಿ.ವೀರೇಶ್ವರ, ವೀರೇಶ್ ಅಂಗಡಿ, ಪಿ.ಶ್ರೀನಿವಾಸಲು, ಇಂದಿರಾ ಕಲಾಲ್, ವಿರೇಂದ್ರ ನಾಗಲದಿನ್ನಿ, ರಾಮ್ ಪ್ರಸಾದ್ ಗಾಂಧಿ, ಹೆಚ್.ವೆಂಕಟೇಶ್, ಕೆ.ಬಿ.ಖವಾಸ್, ಆನಂತ್ ಜೋಶಿ ಹಾಗೂ ಎಸ್.ಎಂ.ಬಸವರಾಜ ಇವರು ಜಿಲ್ಲಾ ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿದ್ದಾರೆ.

ಸಂಘದ ಪದಾಧಿಕಾರಿಗಳ ಚುನಾವಣಾಧಿಕಾರಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆ ಹಿರಿಯ ಸಹಾಯಕ ನಿದೇರ್ಶಕರಾದ ಧನಂಜಯಪ್ಪ.ಬಿ. ಇವರು ಚುನಾವಣಾ ಪ್ರಕ್ರಿಯೆ ನಡೆಸಿ ಚುನಾವಣಾ ಫಲಿತಾಂಶ ಘೋಷಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande