
ವಿಜಯಪುರ, 11 ನವೆಂಬರ್ (ಹಿ.ಸ.) :
ಆ್ಯಂಕರ್ : ಕೆಬಿಜೆಎನ್ಎಲ್ ಎಡ ದಂಡೆ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕರು, ಓರ್ವ ಯುವತಿ ನಾಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಶಿರೋಳ ಗ್ರಾಮದ ಬಳಿಯ ಕಾಲುವೆಯಲ್ಲಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸುಡಗಾಡು ಸಿದ್ದ ಸಮುದಾಯದ ಬಾಲಕರು ಹಾಗೂ ಯುವತಿ ಬಸಮ್ಮ ಕೊಣ್ಣೂರ (21) ಸಂತೋಷ ಕೊಣ್ಣೂರು (16) ಹಾಗೂ ರವಿ ಕೊಣ್ಣೂರು (15) ಕಾಲುವೆ ನೀರಲ್ಲಿ ನಾಪತ್ತೆಯಾಗಿದ್ದಾರೆ.
ಒಂದೇ ಕುಟುಂಬದ ಬಾಲಕರು ಹಾಗೂ ಯುವತಿ ಆಗಿದ್ದಾರೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರ ಭೇಟಿ ಪರಿಶೀಲನೆ ನಡೆಸಿ, ಮೂವರ ಶೋಧಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಮುಂದಾಗಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande