
ಬಳ್ಳಾರಿ, 12 ನವೆಂಬರ್ (ಹಿ.ಸ.)
ಆ್ಯಂಕರ್ : ನವೆಂಬರ್ 13 ರಿಂದ 19 ರ ವರೆಗೆ ಬಳ್ಳಾರಿಯಲ್ಲಿ ನಡೆಯಲಿರುವ `ಅಗ್ನಿವೀರ' ನೇಮಕಾತಿ ರ್ಯಾಲಿಯಲ್ಲಿ
ಅಭ್ಯರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಸೈನಿಕ ಮಿತ್ರ ತಂಡ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವ ಸೈನಿಕ ಮಿತ್ರ ತಂಡ, ಭಾರತೀಯ ಸೇನಾ ವತಿಯಿಂದ ಅಗ್ನಿವೀರ ಸೈನಿಕರ ನೇಮಕಾತಿ ರ್ಯಾಲಿಯು ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯ ಮತ್ತು ದೇಶದ ವಿವಿಧ ಭಾಗಗಳಿಂದ
ಅಭ್ಯರ್ಥಿಗಳು ಆಗಮಿಸಲಿದ್ದಾರೆ. ಅಭ್ಯರ್ಥಿಗಳಿಗೆ ವಸತಿ, ಊಟದ ವ್ಯವಸ್ಥೆ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು ಎಂದು ತಂಡವು ಕೋರಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್