ನೀರಾವರಿ ಸಲಹಾ ಸಮಿತಿ ಸಭೆ ಬೆಂಗಳೂರಿನಲ್ಲಿ ನವೆಂಬರ್ 14ಕ್ಕೆ
ರಾಯಚೂರು , 12 ನವೆಂಬರ್ (ಹಿ.ಸ.) ಆ್ಯಂಕರ್ : 2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 125ನೇ ನೀರಾವರಿ ಸಲಹಾ ಸಮಿತಿ ಸಭೆಯು ನವೆಂಬರ್ 14ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ
ನೀರಾವರಿ ಸಲಹಾ ಸಮಿತಿ ಸಭೆ ಬೆಂಗಳೂರಿನಲ್ಲಿ ನವೆಂಬರ್ 14ಕ್ಕೆ


ರಾಯಚೂರು , 12 ನವೆಂಬರ್ (ಹಿ.ಸ.)

ಆ್ಯಂಕರ್ : 2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 125ನೇ ನೀರಾವರಿ ಸಲಹಾ ಸಮಿತಿ ಸಭೆಯು ನವೆಂಬರ್ 14ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ವಿಧಾನಸೌಧದ 3ನೇ ಮಹಡಿಯ ಸಮಿತಿ ಕೊಠಡಿ ಸಂಖ್ಯೆ:313ರಲ್ಲಿ ನಿಗಧಿಪಡಿಸಲಾಗಿದೆ.

ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.

ಸಚಿವರು, ಲೋಕಸಭಾ ಸದಸ್ಯರು, ವಿಧಾನಸಭೆ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರು, ಮುನಿರಾಬಾದ್ ತುಂಗಭದ್ರಾ ಯೋಜನೆಯ ಆಡಳಿತಾಧಿಕಾರಿಗಳು, ನೀರಾವರಿ ಕೇಂದ್ರ ವಲಯದ ಎಂಜಿನಿಯರು, ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿಯ ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನೀತರರು ಸಭೆಯಲ್ಲಿ ಉಪಸ್ಥಿತರಿರುವರು ಎಂದು ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್.ಬಿ.ಮಲ್ಲಿಗವಾಡ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande