
ವಿಜಯಪುರ, 12 ನವೆಂಬರ್ (ಹಿ.ಸ.) :
ಆ್ಯಂಕರ್ : ಸರ್ಕಾರದ ನಾನಾ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ವಿಜಯಪುರ ನಗರದ ಡಾ.ಬಿ.ಆರ್ ಅಂಬೇಡ್ಕರ್ ಮೈದಾನದಿಂದ ಅಂಬೇಡ್ಕರ್ ಸರ್ಕಲ್ ವರೆಗೂ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಹುದ್ದೆಗಳ ಭರ್ತಿ ಮಾಡಿಲ್ಲ ಎಂದು ಸ್ಪರ್ಧಾರ್ಥಿಗಳು, ಹುದ್ದೆಗಳ ಆಕಾಂಕ್ಷಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಯೋಮಿತಿ ಹೆಚ್ಚಳ ಮಾಡಬೇಕು. ಆಕಾಂಕ್ಷಿತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿ ಕಿಡಿಕಾರಿದರು.
ಯಾವುದೇ ಅಹಿತಕರ ಘಟನೆಗಳು ಆಗದಂತೆ ಸ್ಥಳದಲ್ಲಿ ಬೀಗಿ ಪೊಲೀಸ್ ಭದ್ರತೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande